Webdunia - Bharat's app for daily news and videos

Install App

ನಟ ಜಗ್ಗೇಶ್ ಮೇಲೆ ಹಲ್ಲೆ ಆರೋಪ ; ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Webdunia
ಶನಿವಾರ, 7 ಏಪ್ರಿಲ್ 2018 (14:40 IST)
ಬೆಂಗಳೂರು : ಬಿಜೆಪಿ ಮುಖಂಡ ನಟ ಜಗ್ಗೇಶ್ ಅವರು ರವಿಕುಮಾರ್ ಎಂಬುವವರ  ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರವಿಕುಮಾರ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಜಗ್ಗೇ ಶ್ ಅವರ ಸಂಬಂಧಿ ಮಾದೇಗೌಡ ಎಂಬುವವರು ಮಲ್ಲೇಶ್ವರಂನಲ್ಲಿ ಪಾನೀಪುರಿ ಗಾಡಿ ಇಟ್ಟುಕೊಂಡಿದ್ದರು. ಆದರೆ ಅಲ್ಲಿಗೆ ಬಂದಿದ್ದ ರವಿಕುಮಾರ್ ಅವರು ರಸ್ತೆ ಬದಿ ಗಾಡಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ತಾನು ಜಗ್ಗೇಶ್ ಅವರ ಸಂಬಂಧಿ ಎಂದು ಮಾದೇಗೌಡ ಅವರು ಧಮ್ಕಿ ಹಾಕಿದಲ್ಲದೆ ಕೂಡಲೇ ಜಗ್ಗೇಶ್ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.


ತಕ್ಷಣ ಸ್ಥಳಕ್ಕಾಗಮಿಸಿದ ಜಗ್ಗೇಶ್ ಅವರು ಗಾಡಿ ಇಲ್ಲಿಯೇ ಇಟ್ಟುಕೊಳ್ತಾನೆ ಏನು ಮಾಡ್ತೀಯಾ ಎಂದು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು  ರವಿಕುಮಾರ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಜಗ್ಗೇಶ್ ಅವರು,’ಕಾರ್ಪೋರೇಟರ್ ಮಂಜುನಾಥ್ ಹೆಸರಲ್ಲಿ ಒಬ್ಬ ರೋಲ್ ಕಾಲ್ ಮಾಡ್ತಿದ್ದ. ನನಗೆ ಫೋನ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ರು.ಘಟನಾ ಸ್ಥಳಕ್ಕೆ ಹೋದಾಗ ಆರೋಪಿ ಪರಾರಿಯಾಗಲು ಯತ್ನಿಸಿದ. ಬಳಿಕ ಇಬ್ಬರು ಪೊಲೀಸರು ಸ್ಥಳಕ್ಕೆ ಬಂದ್ರು. ಪೊಲೀಸರ ಸಹಾಯದಿಂದ ಸ್ಟೇಶನ್ ಗೆ ಕರೆದೊಯ್ಯಲಾಯ್ತು. ಮಾತುಕತೆ ಬಳಿಕ ಅವನ ಪಾಡಿಗೆ ಅವನು ಹೋದ ’ ಎಂದು ಹಲ್ಲೆ ಆರೋಪವನ್ನು ಅಲ್ಲಗೆಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments