Select Your Language

Notifications

webdunia
webdunia
webdunia
webdunia

ದಿಢೀರ್ ಅಸ್ವಸ್ಥರಾದ ಶಿವರಾಜ್ ಕುಮಾರ್; ಆಸ್ಪತ್ರೆಗೆ ದಾಖಲು

ದಿಢೀರ್ ಅಸ್ವಸ್ಥರಾದ ಶಿವರಾಜ್ ಕುಮಾರ್; ಆಸ್ಪತ್ರೆಗೆ ದಾಖಲು
ಬೆಂಗಳೂರು , ಮಂಗಳವಾರ, 6 ಅಕ್ಟೋಬರ್ 2015 (12:12 IST)
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ವಿಠ್ಠಲ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ ವ್ಯಾಯಾಮ ಮಾಡುತ್ತಿದ್ದ ಅವರ ಬಲಭುಜದಲ್ಲಿ ಸಣ್ಣ ಮಟ್ಟಿಗೆ ನೋವು ಕಾಣಿಸಿಕೊಂಡಿತು. ಹೀಗಾಗಿ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರಬಹುದೆಂಬ ಶಂಕೆಯಲ್ಲಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 
 
ಶಿವರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದೆ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಪತ್ನಿ ಗೀತಾ ಕೊಲಂಬಿಯಾ ಆಸ್ಪತ್ರೆಗೆ ಕರೆದೊಯ್ದರು, ಬಳಿಕ ಅವರನ್ನು ವಿಠಲ ಮಲ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದು ಬಂದಿದೆ. 
 
ಶಿವರಾಜಕುಮಾರ್ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಮಸ್ಯೆ ಕಾಣಿಸಿಕೊಂಡಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ. ಅವರ ಆರೋಗ್ಯದ ಬಗ್ಗೆ ಗಾಬರಿ ಬೇಡ ಎಂದು ಅವರ ಪತ್ನಿ ಗೀತಾ ಶಿವರಾಜಕುಮಾರ್ ಮತ್ತು ಭಾವ ಮಧು ಬಂಗಾರಪ್ಪ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.
 
ರಕ್ತನಾಳದಲ್ಲಿ ಬ್ಲಾಕ್ ಇದೆಯೇ ಎಂದು ಕಂಡುಕೊಳ್ಳಲು ಶಿವರಾಜ್ ಕುಮಾರ್ ಅವರಿಗೆ ಆ್ಯಂಜಿಯೋಗ್ರಾಮ್ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ಬ್ಲಾಕ್ ಕಂಡು ಬಂದಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
 
ವೈದ್ಯ ವಿ.ಕೆ. ಶ್ರೀನಿವಾಸ್ ಶಿವಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಶಿವಣ್ಣ ಅವರ ಆರೋಗ್ಯ ಸ್ಥಿರವಾಗಿದೆ. ಎರಡು- ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿಟ್ಟುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada