Select Your Language

Notifications

webdunia
webdunia
webdunia
webdunia

ದರ್ಶನ್‌ ಭೇಟಿಗೆ ಬಂದ ನಟ ವಿನೋಧ್ ಪ್ರಭಾಕರ್

ದರ್ಶನ್‌ ಭೇಟಿಗೆ ಬಂದ ನಟ ವಿನೋಧ್ ಪ್ರಭಾಕರ್

Sampriya

ಬೆಂಗಳೂರು , ಸೋಮವಾರ, 24 ಜೂನ್ 2024 (15:03 IST)
ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ಅವರ ಸ್ನೇಹಿತ, ನಟ ವಿನೋಧ್ ಪ್ರಭಾಕರ್ ಭೇಟಿಯಾದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್‌ ಹಾಗೂ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಹಾಗೂ ಗ್ಯಾಂಗ್‌ ಜೈಲು ಸೇರಿದೆ. ಇದೀಗ ದರ್ಶನ್‌ ಕುಟುಂಬಸ್ಥರು ಹಾಗೂ ಆಪ್ತರು ನಟನ ಬಳಿ ಮಾತನಾಡಲು ಆಗಮಿಸುತ್ತಿದ್ದಾರೆ. ಇನ್ನೂ ದರ್ಶನ್‌ರನ್ನು ಪತ್ನಿ ವಿಜಯಲಕ್ಷ್ಮೀ ಮಗ ವಿನೀಶ್ ಭೇಟಿಯಾಗಿ ಮಾತುಕತೆ ನಡೆಸಿದರು.

ಇಂದು ನಟ ವಿನೋದ್ ಪ್ರಭಾಕರ್ ಅವರು ದರ್ಶನ್‌ ಅವರನ್ನು ಭೇಟಿ ಮಾಡಲು ಪರಪ್ಪನ ಅಗ್ರಹಾರದ ಬಳಿ ಬಂದಿದ್ದಾರೆ. ಸ್ನೇಹಿತರ ಜೊತೆ ಚೆಕ್ ಪೋಸ್ಟ್ ಮೂಲಕ ಜೈಲಿನತ್ತ ಹೋಗಿದ್ದಾರೆ.

ಭೇಟಿಗೂ ಮುನ್ನಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಭೇಟಿಗೆ ಅವಕಾಶ ಕೇಳಿದ್ದೆ, ಒಳಗೆ ಬಿಟ್ರೆ ಭೇಟಿ ಆಗುತ್ತೇನೆ. ಕುಟುಂಬದವರಿಗೆ ಮಾತ್ರ ಅವಕಾಶ ಅಂತ ಹೇಳಿದ್ದಾರೆ. ನೊಡೋಣ ಒಳಗಡೆ ಹೋಗಿ ಅಧಿಕಾರಿಗಳಿಗೆ ಕೇಳಿ ಭೇಟಿ ಆಗ್ತೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಪವಿತ್ರಾ ಗೌಡ, ದರ್ಶನ್ ಲಿಂಕ್