Webdunia - Bharat's app for daily news and videos

Install App

ನಟ ವಿಶಾಲ್ ಸಂಸ್ಥೆ ಮೇಲೆ ಜಿಎಸ್ ಟಿ ತಂಡ ದಾಳಿ

Webdunia
ಮಂಗಳವಾರ, 24 ಅಕ್ಟೋಬರ್ 2017 (09:12 IST)
ಚೆನ್ನೈ: ತಮಿಳು ಸಿನಿಮಾಗೆ ಜಿಎಸ್ ಟಿ ಉರುಳು ಸಿಕ್ಕಿ ಹಾಕಿಕೊಂಡಿದೆ. ಮರ್ಸೆಲ್ ಸಿನಿಮಾದಲ್ಲಿ ಜಿಎಸ್ ಟಿ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬೆನ್ನಲ್ಲೇ ಇನ್ನೊಬ್ಬ ತಮಿಳು ನಟ ವಿಶಾಲ್ ಗೆ ಜಿಎಸ್ ಟಿ ಉರುಳು ಸಿಕ್ಕಿ ಹಾಕಿಕೊಂಡಿದೆ.

 
ವಿಶಾಲ್ ಒಡೆತನದ ಸಿನಿಮಾ ನಿರ್ಮಾಣ ಸಂಸ್ಥೆಯ ಮೇಲೆ ಜಿಎಸ್ ಟಿ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ದಾಳಿ ವೇಳೆ ನಿಯಮ ಉಲ್ಲಂಘನೆ ಮಾಡಿರುವ ದಾಖಲೆಗಳು ಸಿಕ್ಕಿವೆಯೇ ಎಂಬುದು ಸ್ಪಷ್ಟವಾಗಿಲ್ಲ.

ವಿಶೇಷವೆಂದರೆ ಮರ್ಸೆಲ್ ಸಿನಿಮಾವನ್ನು ಮೊಬೈಲ್ ನಲ್ಲಿ ನೋಡಿದ್ದ ಬಿಜೆಪಿ ಮುಖಂಡ ಎಚ್. ರಾಜಾ ವಿರುದ್ಧ ವಿಶಾಲ್ ಕಿಡಿ ಕಾರಿದ ಬೆನ್ನಲ್ಲೇ ಅವರ ಸಂಸ್ಥೆ ಮೇಲೆ ದಾಳಿ ನಡೆದಿದೆ. ಇದು ಇನ್ನೆಷ್ಟು ರಾಜಕೀಯ ತಿರುವು ಪಡೆಯುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments