Webdunia - Bharat's app for daily news and videos

Install App

ನಟಿ ಅರುಂಧತಿ ಆರೋಗ್ಯ ಸ್ಥಿತಿ ಗಂಭೀರ: ಚಿಕಿತ್ಸೆಗೆ ಆರ್ಥಿಕ ಸಹಾಯ ಕೇಳಿದ ಕುಟುಂಬ

Sampriya
ಬುಧವಾರ, 20 ಮಾರ್ಚ್ 2024 (18:57 IST)
ತಿರುವನಂತಪುರಂ:ತಮಿಳು ಮತ್ತು ಮಲೆಯಾಳಂ ನಟಿ ಅರುಂಧತಿ ನಾಯರ್ ಆರು ದಿನಗಳ ಹಿಂದೆ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಇದೀಗ ಅವರ ಕುಟುಂಬ ಅವರ ಮುಂದಿನ ಚಿಕಿತ್ಸೆಗಾಗಿ ಜನರಿಂದ ಆರ್ಥಿಕ ಸಹಾಯವನ್ನು ಕೇಳಿದೆ.

ಅರುಂಧತಿಯ ಆಪ್ತ ಸ್ನೇಹಿತೆ ನಟಿ ರಮ್ಯಾ ಜೋಸೆಫ್ ಅವರು ಸಾಮಾಜಿಕ ಜಾಲತಾಣದಲ್ಲಿ  ಅರುಂಧತಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಯ ಬಿಲ್‌ಗಳನ್ನು ಪಾವತಿಸಲು ಕುಟುಂಬಕ್ಕೆ ಆರ್ಥಿಕ ಸಹಾಯದ ಅಗತ್ಯವಿದೆ ಎಂದು ಹೇಳಿಕೊಂಡಿದ್ದಾರೆ.

ರಮ್ಯಾ ಜೋಸೆಫ್ ಅವರು ಈ ಸಂಬಂಧ ಮಾಧ್ಯಮದ ಜತೆ ಮಾತನಾಡಿ,  ಆರ್ಥಿಕ ಸಹಾಯದ ಅಗತ್ಯವಿರುವ ಕುಟುಂಬದ ಸ್ಥಿತಿ ತಿಳಿದ ನಂತರವೂ ತಮಿಳು ಚಿತ್ರರಂಗದಿಂದ ಯಾವುದೇ ಸಹಾಯ ಬಂದಿಲ್ಲ.  ಅರುಂಧತಿ ಅವರ ಬ್ರೈನ್ ಡೆಡ್ ಆಗಿರುವ ಶಂಕೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಚಿತ್ರರಂಗದಿಂದ ಇದುವರೆಗೆ ಅವರ ಆರೋಗ್ಯವನ್ನು ವಿಚಾರಿಸಲು ಯಾರು ಮುಂದೆ ಬಂದಿಲ್ಲ.
ಅರುಂಧತಿಯ ಸಹೋದರಿ ಆರತಿ ಅವರು ಶಸ್ತ್ರಚಿಕಿತ್ಸೆಯ ಬಿಲ್ ಅನ್ನು ಪಾವತಿಸಲು ಸಹಾಯ ಮಾಡಲು ನಿಧಿಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಅರುಂಧತಿ ಅವರ ತಲೆಗೆ ತೀವ್ರವಾಗಿ ಗಾಯವಾಗಿದೆ. ಎರಡು ದಿನಗಳ ಹಿಂದಿನವರೆಗೂ ಅರುಂಧತಿಯ ಮೆದುಳಿನಿಂದ ಯಾವುದೇ ಸಿಗ್ನಲ್ ಇರಲಿಲ್ಲ, ಆದರೆ ಎಡ ಕಾರ್ನಿಯಾದಲ್ಲಿ ನಿನ್ನೆ ಸ್ವಲ್ಪ ಚಲನೆ ಕಂಡುಬಂದಿದೆ ಮತ್ತು ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಆರತಿ ಬಹಿರಂಗಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments