Webdunia - Bharat's app for daily news and videos

Install App

ವೇದಿಕೆಯಲ್ಲೇ ಯುವ ನಟಿಗೆ ಕಣ್ಣೀರು ತರಿಸಿದ ಹಿರಿಯ ನಟ!

Webdunia
ಶನಿವಾರ, 30 ಸೆಪ್ಟಂಬರ್ 2017 (07:44 IST)
ಚೆನ್ನೈ: ಸಿನಿಮಾ ಪ್ರಚಾರಕ್ಕೆ ಸಂಬಂಧಿಸಿದ ಪತ್ರಿಕಾಗೋಷ್ಠಿಯೊಂದರ ವೇದಿಕೆಯಲ್ಲಿ ತಮಿಳಿನ ಹಿರಿಯ ನಟ ಟಿ ರಾಜೇಂದರ್ ಯುವ ನಾಯಕಿ ಧನ್ಸಿಕಾಗೆ ವೇದಿಕೆಯಲ್ಲೇ ಅವಮಾನ ಮಾಡಿದ ಘಟನೆ ನಡೆದಿದೆ.


ರಜನೀಕಾಂತ್ ಜತೆ ಕಬಾಲಿ ಸಿನಿಮಾದಲ್ಲಿ ಅಭಿನಯಿಸಿದ್ದ ನಾಯಕಿ ನಟಿ ಧನ್ಸಿಕಾ ವಿಳಿತಿರು ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಧನ್ಸಿಕಾ ಮಾತಿನ ನಡುವೆ ರಾಜೇಂದರ್ ಹೆಸರು ಹೇಳಲಿಲ್ಲ.

ಇದು ಹಿರಿಯ ನಟನನ್ನು ಸಿಟ್ಟಿಗೆಬ್ಬಿಸಿತು. ಈ ಚಿತ್ರದಲ್ಲಿ ಕೇವಲ ಒಂದು ಹಾಡಿನಲ್ಲಿ ಬಂದು ಹೋಗುವ ರಾಜೇಂದರ್ ತಕ್ಷಣ ತಮ್ಮ ಸರದಿ ಬಂದಾಗ ಧನ್ಸಿಕಾರನ್ನು ಹಿಗ್ಗಾ ಮುಗ್ಗಾ ಹೀಯಾಳಿಸಿದ್ದಾರೆ.

ತಕ್ಷಣ ಧನ್ಸಿಕಾ ಕ್ಷಮೆ ಕೇಳಲು ಮುಂದಾದಾಗ, ನನಗೆ ಸೀರೆ ಉಡದ ನಾರಿಯಿಂದ ಸಾರಿ ಬೇಕಾಗಿಲ್ಲ ಎಂದು ಅವಹೇಳನ ಮಾಡಿದ್ದಾರೆ. ಇದರಿಂದ ವೇದಿಕೆಯಲ್ಲೇ ನಟಿ ಕಣ್ಣೀರು ಸುರಿಸಿದ್ದಾರೆ. ಆದರೆ ರಾಜೇಂದರ್ ತಮ್ಮ ಹೀಯಾಳಿಕೆ ಮುಂದುವರಿಸಿದ್ದಾರೆ. ಅಚ್ಚರಿಯೆಂದರೆ ಯಾರೂ ಇವರನ್ನು ತಡೆಯಲಿಲ್ಲ.  ಆದರೆ ಟ್ವಿಟರ್ ನಲ್ಲಿ ಈ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments