Webdunia - Bharat's app for daily news and videos

Install App

ವಯನಾಡು ಗುಡ್ಡ ಕುಸಿತ ಪರಿಹಾರ ಕಾರ್ಯಕರ್ತರೊಂದಿಗೆ ಸಾಮಾನ್ಯರಂತೇ ಕೆಲಸ ಮಾಡುತ್ತಿರುವ ಸ್ಟಾರ್ ನಟಿ

Krishnaveni K
ಗುರುವಾರ, 1 ಆಗಸ್ಟ್ 2024 (12:27 IST)
ವಯನಾಡು: ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಗುಡ್ಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 250 ದಾಟಿದೆ. 200 ಕ್ಕೂ ಹೆಚ್ಚು ಜನ ನಾಪತ್ತೆಯಾಗಿದೆ. ಇದೀಗ ವಯನಾಡಿಗಾಗಿ ಜಾತಿ, ಧರ್ಮ, ರಾಜಕೀಯ ಪಕ್ಷದ ಬೇಧವಿಲ್ಲದೇ ಹಲವು ಸಂಘಟನೆಗಳು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.

ಹಲವು ಸ್ಟಾರ್ ನಟರು ಪರಿಹಾರ ಕಾರ್ಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಆದರೆ ಮಲಯಾಳಂ ಸಿನಿಮಾದಲ್ಲಿ ಇತ್ತೀಚೆಗೆ ಜನಪ್ರಿಯವಾಗಿರುವ ನಟಿ ನಿಖಿಲಾ ವಿಮಲ್ ಪರಿಹಾರ ಕಾರ್ಯದಲ್ಲಿ ಕಾರ್ಯಕರ್ತರೊಂದಿಗೆ ತೊಡಗಿಸಿಕೊಂಡಿದ್ದಾರೆ.

ನಿಖಿಲಾ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ವಿಡಿಯೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಯನಾಡಿನಲ್ಲಿ ದುರಂತಕ್ಕೀಡಾದವರಿಗೆ ಆಹಾರ ಸಾಮಗ್ರಿಗಳನ್ನು ಪೂರೈಸುವುದು, ಅದನ್ನು ಪ್ಯಾಕ್ ಮಾಡುವುದು, ಇತ್ಯಾದಿ ನೆರವು ಕಾರ್ಯ ಮಾಡುವಲ್ಲಿ ನಿಖಿಲಾ ತೊಡಗಿಸಿಕೊಂಡಿದ್ದಾರೆ. ಕಣ್ಣೂರಿನ ತಳಿಪ್ಪರಂಬ ಕಲೆಕ್ಷನ್ ಸೆಂಟರ್ ನಲ್ಲಿ ಡಿವೈಎಫ್ ಐ ನೇತೃತ್ವದಲ್ಲಿ ನಡೆಯುತ್ತಿರುವ ಪರಿಹಾರ ಸಾಮಗ್ರಿ ಸಂಗ್ರಹ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.

 
ತಾವು ಸ್ಟಾರ್ ನಟಿ ಎಂಬ ಕೊಂಚವೂ ಹಮ್ಮು-ಬಿಮ್ಮು ಇಲ್ಲದೇ ಸಾಮಾನ್ಯರಂತೇ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೇವಲ ಕ್ಯಾಮರಾಗಳಿಗೆ ಪೋಸ್ ನೀಡಲು ಈ ಕೆಲಸ ಮಾಡುತ್ತಿಲ್ಲ ಎಂಬುದು ಅವರ ಕೆಲಸದಲ್ಲಿನ ತಲ್ಲೀನತೆ ನೋಡಿದರೇ ಸ್ಪಷ್ಟವಾಗುತ್ತದೆ. ಅವರ ಈ ಕೆಲಸಕ್ಕೆ ಈಗ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Prithwi Bhat marriage: ಸರಿಗಮಪ ಸಿಂಗರ್ ಪೃಥ್ವಿ ಭಟ್ ಮದುವೆ ವಿವಾದ: ಮನೆ ಬಿಟ್ಟು ಹೋಗಿದ್ದಕ್ಕೆ ಕಾರಣ ಹೇಳಿದ ಗಾಯಕಿ

ಮುಂದಿನ ಸುದ್ದಿ
Show comments