Webdunia - Bharat's app for daily news and videos

Install App

ಡಿಕೆಶಿ ಸಾಹೇಬ್ರು ಹಾಗೆ ಹೇಳಬಾರದಿತ್ತು ಎನ್ನುತ್ತಲೇ ಸಮರ್ಥಿಸಿದ ನಟಿ ರಮ್ಯಾ

Krishnaveni K
ಗುರುವಾರ, 6 ಮಾರ್ಚ್ 2025 (15:23 IST)
ಬೆಂಗಳೂರು: ಮೇಕೆದಾಟು ಹೋರಾಟಕ್ಕೆ ಬಾರದ ಸ್ಯಾಂಡಲ್ ವುಡ್ ನಟರ ನಟ್ಟು ಬೋಲ್ಟ್ ಸರಿ ಮಾಡ್ತೀನಿ ಎಂದಿದ್ದ ಡಿಕೆ ಶಿವಕುಮಾರ್ ಹೇಳಿಕೆಯನ್ನು ಇಂದು ನಟಿ ರಮ್ಯಾ ಒಂದೆಡೆ ಖಂಡಿಸಿ ಮತ್ತೊಂದೆಡೆ ಸಮರ್ಥಿಸಿಕೊಂಡಿದ್ದಾರೆ.

ಡಿಕೆ ಶಿವಕುಮಾರ್ ನಟ್ಟು ಬೋಲ್ಟ್ ಹೇಳಿಕೆಗೆ ಸ್ಯಾಂಡಲ್ ವುಡ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ನಟಿ ರಮ್ಯಾ ಮಾಧ್ಯಮಗಳಿಗೆ ಡಿಕೆಶಿ ಹೇಳಿದ್ದು ಸರಿ ಎಂದಿದ್ದರು. ಬಳಿಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಕೆಲವರಿಗೆ ಹೊರಗೆ ಬಹಿರಂಗವಾಗಿ ಹೇಳಿಕೆ ನೀಡಲು ಭಯವಿರುತ್ತದೆ. ಹೀಗಾಗಿ ಆ ರೀತಿ ಹೇಳಿಕೆ ನೀಡಬಾರದಿತ್ತು ಎಂದರು.

ಇಂದು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ವಿವಾದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ, ಡಿಕೆ ಶಿವಕುಮಾರ್ ಬಳಸಿರುವ ನಟ್ಟು ಬೋಲ್ಟ್ ಪದವನ್ನು ಖಂಡಿಸಿದ್ದು, ಅವರ ಹೇಳಿಕೆಯನ್ನು ಇನ್ನೊಂದೆಡೆ ಸಮರ್ಥಿಸಿಕೊಂಡಿದ್ದಾರೆ.

‘ಡಿಸಿಎಂ ಡಿಕೆಶಿವಕುಮಾರ್ ಅವರ ನಟ್ಟು ಬೋಲ್ಟ್ ಹೇಳಿಕೆ ಸರಿಯಲ್ಲ. ಅವರು ಹಾಗೆ ಹೇಳಬಾರದಿತ್ತು. ಆದರೆ ಯಾರನ್ನೂ ಬೆದರಿಸುವ ಉದ್ದೇಶವಲ್ಲ ಎಂದು ಅವರೇ ಹೇಳಿದ್ದಾರೆ. ಆದರೆ ಅವರು ಹೇಳಿದ ಹೇಳಿಕೆ ತಪ್ಪು. ಹಲವರಿಗೆ ಇದು ಇಷ್ಟವಾಗಿಲ್ಲ. ಈ ವಿಚಾರವಾಗಿ ಡಿಕೆಶಿ ಕ್ಲಾರಿಟಿ ಕೊಟ್ಟಿದ್ದಾರೆ. ಹೀಗಾಗಿ ಇದನ್ನು ಇಲ್ಲಿಗೇ ಬಿಡುವುದು ಒಳ್ಳೆಯದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments