Webdunia - Bharat's app for daily news and videos

Install App

ನಟಿ ಶ್ರುತಿ, ಶರಣ್‌ ಕುಟುಂಬದ ಮನೆ ಮಗಳು ಚಂದನವನಕ್ಕೆ ಎಂಟ್ರಿ

Sampriya
ಸೋಮವಾರ, 21 ಅಕ್ಟೋಬರ್ 2024 (15:41 IST)
Photo Courtesy X
ನಿರ್ದೇಶಕ ಸಿಂಪಲ್ ಸುನಿ ಅವರು ಆ್ಯಕ್ಷನ್ ಕಟ್ ಹೇಳಲಿರುವ ದೇವರು ರುಜು ಮಾಡಿದನು ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನಡೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದೇವರು ರುಜು ಮಾಡಿದನು ಸಿನಿಮಾದ ಮುಹೂರ್ತ ನೆರವೇರಿದೆ.

ಈ ಸಿನಿಮಾದ ಮೂಲಕ ಯುವ ನಟ ವಿರಾಟ್ ಅವರು ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ಣು ವಿರಾಟ್ ಜೋಡಿಯಾಗಿ ಕನ್ನಡದ ಖ್ಯಾತ ಶ್ರುತಿ ಮತ್ತು ಶರಣ್  ಅವರ ಕೊನೆಯ ಸಹೋದರಿ ಉಷಾ ಅವರ ಪುತ್ರಿ ಕೀರ್ತಿ ಅಭಿನಯಿಸಲಿದ್ದಾರೆ. ‌‌

ಸೊಗಸಾದ ಸಂಗೀತದ ಕಥೆ ಜೊತೆಗೆ ರಕ್ತ ಚರಿತ್ರೆಯನ್ನು ಸುನಿ ಹೇಳೋದಿಕ್ಕೆ ಹೊರಟಿದ್ದಾರೆ. 'ದೇವರು ರುಜು ಮಾಡಿದನು' ಟೀಸರ್ ಬಹಳ ಇಂಪ್ರೆಸಿವ್ ಆಗಿದೆ. ಕ್ಯಾಮೆರಾ ವರ್ಕ್, ಅದ್ಭುತ ಸಂಗೀತದೊಂದಿಗೆ ನಾಯಕ ವಿರಾಜ್, ನಾಯಕಿಯರಾದ ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಅಭಿನಯದಲ್ಲಿ ಟೀಸರ್ ತೂಕ ಹೆಚ್ಚಿಸಿದೆ.

ಮುಹೂರ್ತದ ಬಳಿಕ ಮಾತನಾಡಿದ ವಿರಾಜ್ ಅವರು, ತುಂಬಾ ಖುಷಿಯಾಗುತ್ತಿದೆ. ಇದು ನನ್ನ ಎಷ್ಟೋ ವರ್ಷದ ಕನಸು. ಚಿಕ್ಕವನಿದ್ದಾಗಿನಿಂದಲೂ ನಟನಾಗಬೇಕು ಎಂಬ ಆಸೆ ನನ್ನಲ್ಲಿತ್ತು. ಸ್ಕೂಲ್ ಟೀಚರ್ಸ್ ಡ್ಯಾನ್ಸ್, ನಟನೆ ಮಾಡು ಎಂದು ಹೇಳುತ್ತಿದ್ದರು. ನಾನು ಆಗ ಮಾಡುತ್ತಿದ್ದೆ. ಆಗ ನನ್ನ ಫ್ರೆಂಡ್ಸ್ ಚಪ್ಪಾಳೆ ತಟ್ಟುತ್ತಿದ್ದರು. ಆಗ ಇದೇನೂ ಕಿಕ್ ಇದೆಯಲ್ಲಾ, ಸಖತ್ ಇದೆ ಎನಿಸುವುದು. ಕಲಾವಿದರಿಗೆ ಇದೆ ಬೇಕಿರುವುದು. ಜನ ಕೊಡುವ ರೆಸ್ಪಾನ್ಸ್ ಅದು ವಂಡರ್ ಫುಲ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments