ವ್ಯಕ್ತಿತ್ವವೇ ಕಳೆದುಕೊಂಡರೆ ಎಲ್ಲವೂ ಕಳಕೊಂಡಂತೆ: ದರ್ಶನ್ ಕೇಸ್ ಬಗ್ಗೆ ಅದಿತಿ ಪ್ರಭುದೇವ ಕಾಮೆಂಟ್

Krishnaveni K
ಶನಿವಾರ, 15 ಜೂನ್ 2024 (10:56 IST)
Photo Credit: Instagram
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಬಗ್ಗೆ ಈಗ ಒಬ್ಬೊಬ್ಬರೇ ಚಿತ್ರತಾರೆಯರು ತಮ್ಮ ಧ್ವನಿ ಎತ್ತಲು ಶುರು ಮಾಡಿದ್ದಾರೆ.

ನಟಿ ರಮ್ಯಾ ನೇರವಾಗಿ ದರ್ಶನ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆಯಾಗಬೇಕು ಎಂದಿದ್ದರು. ಅಲ್ಲದೆ, ದರ್ಶನ್ ಪ್ರಕರಣದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತಿರುವ ಪೊಲೀಸರ ಕ್ರಮವನ್ನು ಶ್ಲಾಘಿಸಿದ್ದರು. ನ್ಯಾಯದ ಮುಂದೆ ಎಲ್ಲರೂ ಒಂದೇ ಎಂದಿದ್ದರು.

ಅವರ ಜೊತೆಗೆ ನವರಸನಾಯಕ ಜಗ್ಗೇಶ್ ಕೂಡಾ ಕೊಲ್ಲವುದೇ ಎಲ್ಲದಕ್ಕೂ ಪರಿಹಾರವಲ್ಲ ಎಂದು ಹಿತವಚನದ ಸಾಲೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಅಪ್ಪಟ ಕನ್ನಡ ನಟಿ ಅದಿತಿ ಪ್ರಭುದೇವ ಸರದಿ. ಅದಿತಿ ಕೂಡಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಈಗ ದರ್ಶನ್ ಪ್ರಕರಣದ ಕುರಿತು ಪರೋಕ್ಷವಾಗಿ ಪೋಸ್ಟ್ ಮಾಡಿದ್ದಾರೆ.

‘ಸಂಪತ್ತು ನಷ್ಟವಾದರೆ ಅದರಿಂದ ಏನೂ ಕಳೆದುಕೊಳ್ಳಲ್ಲ. ಆರೋಗ್ಯ ಕಳೆದುಕೊಂಡರೆ ಏನೋ ಒಂದನ್ನು ಕಳೆದುಕೊಳ್ಳುತ್ತೀರಿ. ಆದರೆ ವ್ಯಕ್ತಿತ್ವವನ್ನೇ ಕಳೆದುಕೊಂಡರೆ ಎಲ್ಲವನ್ನೂ ಕಳೆದುಕೊಂಡಂತೆ’ ಎಂದು ಆಂಗ್ಲ ಭಾಷೆಯ ನುಡಿಯೊಂದನ್ನು ಪ್ರಕಟಿಸಿ ದಯಾಮಯರಾಗಿರಿ ಎಂದು ಕಿವಿ ಮಾತು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ಮುಂದಿನ ಸುದ್ದಿ
Show comments