ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಕಠಿಣವಾದ ನಿಯಮದಿಂದ ದಾಸ ಸಂಕಷ್ಟ ಪಡುತ್ತಿದ್ದಾರೆ. ಈ ವಿಚಾರವನ್ನು ದರ್ಶನೇ ನ್ಯಾಯಾಧೀಶರ ಮುಂದೆ ಹೇಳಿಕೊಂಡಿದ್ದರು.
ಮಂಗಳವಾರ ಈ ವಿಚಾರವಾಗಿ ಕೋರ್ಟ್ನಲ್ಲಿ ಕನಿಷ್ಠ ಸೌಲಭ್ಯಗಳನ್ನು ನೀಡುವ ಬಗ್ಗೆ ಅಧಿಕೃತವಾಗಿ ಸೂಚನೆ ನೀಡಲಾಗಿದೆ. ಇದರಿಂದ ದರ್ಶನ್ ಕೊಂಚಮಟ್ಟಿಗೆ ರಿಲ್ಯಾಕ್ಸ್ ಆಗಿದ್ದಾರೆ.
ಕೋಣೆಯಲ್ಲಿ ಸರಿಯಾದ ಹಾಸಿಗೆ, ದಿಂಬು ಇಲ್ಲದೆ ಜೈಲಲ್ಲಿ ತೊಂದರೆ ಅನುಭವಿಸುತ್ತಿದ್ದ ದರ್ಶನ್ಗೆ ಇದೀಗ ಕನಿಷ್ಠ ಸೌಲಭ್ಯ ನೀಡಲಾಗಿದೆ.
ಹಾಗಾಗಿ ದರ್ಶನ್ಗೆ ಇಂದು ಎರಡು ಜಮ್ಖಾನ ಹಾಗೂ ಚಾಪೆ, ದಿಂಬನ್ನು ಜೈಲಿನ ಅಧಿಕಾರಿಗಳು ನೀಡಿದ್ದಾರೆ. ಮಂಗಳವಾರ ರಾತ್ರಿ ಕೇಂದ್ರ ಕಾರಾಗೃಹಕ್ಕೆ ಕೋರ್ಟ್ ಆದೇಶದ ಪ್ರತಿ ತಲುಪಿದ್ದು, ಅದರಂತೆ ದರ್ಶನ್ಗೆ ತನ್ನ ಸೆಲ್ ಮುಂದೆ ವಾಕಿಂಗ್ ಮಾಡಲು ಅವಕಾಶ ದೊರೆತಿದೆ. ಜೊತೆಗೆ ಎರಡು ಗಟ್ಟಿಯಾದ ಜಮ್ಖಾನ ಒಂದು ಚಾಪೆ ಜೊತೆಗೆ ತಲೆದಿಂಬು ನೀಡಿದ್ದಾರೆ ಜೈಲ್ನ ಅಧಿಕಾರಿಗಳು.
ಇನ್ನೂ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಜೈಲು ಅಧಿಕಾರಿಗಳು ಅರ್ಜಿ ಹಾಕಿದ್ದರು. ಆದರೆ ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ದರ್ಶನ್ಗೆ ಸ್ವಲ್ಪಮಟ್ಟಿಗೆ ರಿಲೀಫ್ ಎಂದೆ ಹೇಳಬಹುದು. ಇನ್ನು ದರ್ಶನ್ ಸೆಲ್ನಲ್ಲಿ ಇದ್ದು ಸೆಕ್ಯೂರಿಟಿ ಬ್ಯಾರಕ್ಗೆ ಶಿಫ್ಟ್ ಮಾಡುವ ವಿಚಾರವಾಗಿ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.