Webdunia - Bharat's app for daily news and videos

Install App

ಟೋಬಿ ನಂತ್ರ ಮತ್ತೊಂದು ಪ್ರಯೋಗಮುಖಿ ಚಿತ್ರಕ್ಕೆ ಕೈ ಹಾಕಿದ 'ರಾಜ್‌ ಬಿ ಶೆಟ್ಟಿ'

Sampriya
ಭಾನುವಾರ, 30 ಜೂನ್ 2024 (12:38 IST)
Photo Courtesy X
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಯೋಗಮುಖಿ ಸಿನಿಮಾಗಳ ಮೂಲಕ ಮನ  ಗೆದ್ದಿರುವ ನಟ ರಾಜ್ ಬಿ ಶೆಟ್ಟಿ ಇದೀಗ ಮತ್ತೊಂದು ಕಥೆಯೊಂದಿಗೆ ತೆರೆಗೆ ಬರಲು ಸಜ್ಜಾಗುತ್ತಿದ್ದಾರೆ.

ಇನ್ನೂ ಸಿನಿಮಾಗೆ ರೂಪಾಂತರ ಎಂದು ಶೀರ್ಷಿಕೆ ಅಂತಿಮಗೊಂಡಿದ್ದು ಚಿತ್ರದ ಪೋಸ್ಟರ್‌ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದೆ. ವಿಶೇಷ ಏನೆಂದರೆ ಈ ಸಿನಿಮಾವು 'ಒಂದು ಮೊಟ್ಟೆ ಕಥೆ' ಚಿತ್ರದ ತಂಡದ ಜತೆ ರಾಜ್ ಬಿ ಶೆಟ್ಟಿ ಮತ್ತೇ ಕೈ ಜೋಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಷಯ ಹಂಚಿಕೊಂಡಿರುವ ಅವರು, 'ಕೆಲ ಸಿನೆಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ. ಈಗ ರೂಪಾಂತರದ ಪೋಸ್ಟರ್‌ ಅನ್ನು ನಿಮ್ಮ ಮುಂದೆ ಬಿಡುಗಡೆಗೊಳಿಸುತ್ತಿದ್ದೇವೆ. ಸದ್ಯದಲ್ಲೇ ಚಿತ್ರವೂ ನಿಮ್ಮ ಮುಂದೆ ಬರಲಿದೆ. ಎಂದಿನಂತೆ ಜೊತೆಗಿರಿ' ಎಂದು ಬರೆದುಕೊಂಡಿದ್ದಾರೆ.

ಒಂದು ಮೊಟ್ಟೆಯ ಕಥೆಯ ನಿರ್ಮಾಪಕರಾದ ಸುಹಾನ್‌ ಪ್ರಸಾದ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಿಥಿಲೇಶ್‌ ಎಡವಲತ್‌ ಅವರು ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಮಿಧುನ್‌ ಮುಕುಂದನ್‌ ಸಂಗೀತವಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

ಮುಂದಿನ ಸುದ್ದಿ
Show comments