Select Your Language

Notifications

webdunia
webdunia
webdunia
webdunia

ವಿಷ್ಣುವರ್ಧನ್ ಸ್ಮಾರಕ ಬಳಿಕ, ಈಗ ಕುಚಿಕು ಗೆಳೆಯ ಅಂಬರೀಶ್ ಸ್ಮಾರಕ ಲೋಕಾರ್ಪಣೆ

ವಿಷ್ಣುವರ್ಧನ್ ಸ್ಮಾರಕ ಬಳಿಕ, ಈಗ ಕುಚಿಕು ಗೆಳೆಯ ಅಂಬರೀಶ್ ಸ್ಮಾರಕ ಲೋಕಾರ್ಪಣೆ
ಬೆಂಗಳೂರು , ಬುಧವಾರ, 8 ಫೆಬ್ರವರಿ 2023 (08:55 IST)
Photo Courtesy: Twitter
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಉದ್ಘಾಟನೆಯಾಗಿದೆ. ಇದೀಗ ಅವರ ಕುಚಿಕು ಗೆಳೆಯ ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕ ಉದ್ಘಾಟನೆಯ ಸಮಯ.

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸಮಾಧಿಯಿದೆ. ಇಲ್ಲಿಯೇ ಅವರ ಸ್ಮಾರಕ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದ ಹಿಂದೆ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಹಣ ನೀಡಲಾಗಿತ್ತು. ಇದೀಗ ಅದು ಪೂರ್ಣಗೊಂಡಿದೆ. ಮಾರ್ಚ್ ಮೊದಲ ವಾರದಲ್ಲಿ ಸ್ಮಾರಕ ಲೋಕಾರ್ಪಣೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ರಸ್ತೆ ಉದ್ಘಾಟನೆ ವೇಳೆ ಅವರು ಈ ಮಾತನ್ನು ಹೇಳಿದ್ದಾರೆ. ಇದಲ್ಲದೆ, ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಅಂಬರೀಶ್ ಹೆಸರು ಇಡಲಾಗುತ್ತದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃತಿ ಸನನ್ ಜೊತೆ ಪ್ರಭಾಸ್ ಮುಂದಿನ ವಾರ ಎಂಗೇಜ್ ಮೆಂಟ್?!