Webdunia - Bharat's app for daily news and videos

Install App

ಅಗ್ನಿಸಾಕ್ಷಿ ಪಾರ್ಟ್ 2 ಸದ್ಯದಲ್ಲೇ? ಸುಳಿವು ಕೊಟ್ಟ ರಾಜೇಶ್ ಧ್ರುವ

Webdunia
ಸೋಮವಾರ, 12 ಅಕ್ಟೋಬರ್ 2020 (09:35 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ  ಅಗ್ನಿಸಾಕ್ಷಿ ಧಾರವಾಹಿ ಅದೆಷ್ಟು ಹೆಂಗಳೆಯರಿಗೆ ಮೋಡಿ ಮಾಡಿತ್ತು. ಬರೋಬ್ಬರಿ ಆರು ವರ್ಷ ಮೂಡಿ ಬಂದ ಈ ಧಾರವಾಹಿ ಕೆಲವು ತಿಂಗಳ ಹಿಂದಷ್ಟೇ ಕತೆ ಮುಗಿಸಿತ್ತು.


ಆದರೆ ಈಗ ಮತ್ತೆ ಅಗ್ನಿಸಾಕ್ಷಿ ಪಾರ್ಟ್ 2 ಆರಂಭವಾಗುವ ಲಕ್ಷಣ ಕಾಣುತ್ತಿದೆ. ಮತ್ತೆ ನಾವು ಹೊಸ ಎಪಿಸೋಡ್ ನೊಂದಿಗೆ ಬರಲಿದ್ದೇವೆ ಎಂದು ನಟ ರಾಜೇಶ್ ಧ್ರುವ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಈ ಫೋಟೋದಲ್ಲಿ ಹೀರೋ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ, ಸನ್ನಿಧಿ ಅಲಿಯಾಸ್ ವೈಷ್ಣವಿ ಗೌಡ, ಮುಖ್ಯಮಂತ್ರಿ ಚಂದ್ರು, ಸುಕೃತಾ ನಾಗ್ ಇದ್ದಾರೆ. ಹೀಗಾಗಿ ಈ ಟೀಂ ಮತ್ತೆ ಹೊಸ ಎಪಿಸೋಡ್ ಗಳೊಂದಿಗೆ ಕಿರುತೆರೆಗೆ ಬರುವುದು ಪಕ್ಕಾ ಆಗಿದೆ. ಈ ವಿಚಾರ ತಿಳಿಯುತ್ತಿದ್ದಂತೇ ಅಭಿಮಾನಿಗಳು ಖುಷಿಯಿಂದಲೇ ಪ್ರತಿಕ್ರಿಯಿಸುತ್ತಿದ್ದಾರೆ.

ಅತ್ತ ವಿಜಯ್ ಸೂರ್ಯ ಪ್ರೇಮಲೋಕ ಧಾರವಾಹಿ ಮುಗಿಸಿ ಹೊಸ ಸಿನಿಮಾವೊಂದರಲ್ಲಿ ಅಭಿನಯಿಸಿ ಬಂದಿದ್ದಾರೆ. ಇತ್ತ ವೈಷ್ಣವಿ ಕೂಡಾ ಅಗ್ನಿಸಾಕ್ಷಿ ಬಳಿಕ ಒಂದು ಸಿನಿಮಾ ಬಿಟ್ಟರೆ ಕಿರುತೆರೆಯಲ್ಲಿ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಹೀಗಾಗಿ ಮತ್ತೆ ಕಿರುತೆರೆಯಲ್ಲಿ ಅಗ್ನಿಸಾಕ್ಷಿ ಜೋಡಿ ಮೋಡಿ ಮಾಡುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments