Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮೇಲೆ ಕೊಲೆ ಬೆದರಿಕೆ ಆರೋಪ ಮಾಡಿದ ಅಹೋರಾತ್ರ: ಅಭಿಮಾನಿಗಳಿಂದ ಹಲ್ಲೆ

Webdunia
ಭಾನುವಾರ, 21 ಮಾರ್ಚ್ 2021 (09:37 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತನಗೆ ಕೊಲೆ ಬೆದರಿಕೆ ಹಾಕಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಆರೋಪ ಮಾಡಿದ್ದ ಬರಹಗಾರ ಅಹೋರಾತ್ರ ಮೇಲೆ ಸಿಟ್ಟಿಗೆದ್ದ  ಕಿಚ್ಚನ ಅಭಿಮಾನಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ.


ಕಿಚ್ಚ ಸುದೀಪ್ ಆನ್ ಲೈನ್ ಜೂಜಾಟ ರಮ್ಮಿ ಸರ್ಕಲ್ ಗೆ ರಾಯಭಾರಿಯಾಗಿರುವುದರ ವಿರುದ್ಧ ಅಹೋರಾತ್ರ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಾಚಮಗೋಚರವಾಗಿ ಟೀಕಿಸುತ್ತಿದ್ದರು. ಇದು ಕಿಚ್ಚನ ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿತ್ತು.

ಇದರ ಬಗ್ಗೆ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ್ದ ಅಹೋರಾತ್ರ ಕಿಚ್ಚ ಸುದೀಪ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಲ್ಲದೆ, ಅವರು ತಮ್ಮ ಆಪ್ತರ ಮೂಲಕ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಇದು ಕಿಚ್ಚನ ಅಭಿಮಾನಿಗಳ ಸಿಟ್ಟು ಮಿತಿಮೀರುವಂತೆ ಮಾಡಿತ್ತು.

ತಮ್ಮ ಮೆಚ್ಚಿನ ಸ್ಟಾರ್ ನಟನ ಬಗ್ಗೆ ಸುಖಾ ಸುಮ್ಮನೇ ಆರೋಪ ಮಾಡುತ್ತಿರುವ ಅಹೋರಾತ್ರ ಮನೆಗೆ ನುಗ್ಗಿದ ಕಿಚ್ಚ ಅಭಿಮಾನಿಗಳು ಈ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಕಿಚ್ಚ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments