Webdunia - Bharat's app for daily news and videos

Install App

ತಂದೆ ರಜನೀಕಾಂತ್ ಪರವಾಗಿ ಪುತ್ರಿ ಐಶ್ವರ್ಯಾ ಬ್ಯಾಟಿಂಗ್

Krishnaveni K
ಭಾನುವಾರ, 28 ಜನವರಿ 2024 (09:20 IST)
ಚೆನ್ನೈ: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಹೋಗಿದ್ದ ಸೂಪರ್ ಸ್ಟಾರ್ ರಜನೀಕಾಂತ್ ರನ್ನು ಸಂಘಿ ಎಂದು ಟೀಕಿಸಿದ್ದವರಿಗೆ ಪುತ್ರಿ ಐಶ್ವರ್ಯಾ ತಿರುಗೇಟು ನೀಡಿದ್ದಾರೆ.

ಲಾಲ್ ಸಲಾಂ ಅಡಿಯೋ ಲಾಂಚ್ ವೇಳೆ ತಂದೆಯ ಬಗ್ಗೆ ಮಾತನಾಡುತ್ತಾ ಐಶ್ವರ್ಯಾ ಭಾವುಕರಾದರು. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗಿದ್ದಕ್ಕೆ ನಮ್ಮ ತಂದೆಯನ್ನು ಕೆಲವರು ಸಂಘಿ ಎನ್ನುತ್ತಿದ್ದಾರೆ. ಆದರೆ ನನ್ನ ತಂದೆ ಸಂಘಿ ಅಲ್ಲ ಎಂದಿದ್ದಾರೆ.

‘ನನ್ನ ತಂದೆಯವರು ಸಂಘಿ ಆಗಿದ್ದರೆ ಲಾಲ್ ಸಲಾಂ ರೀತಿಯ ಸಿನಿಮಾದಲ್ಲಿ ನಟಿಸುತ್ತಲೇ ಇರಲಿಲ್ಲ. ಒಬ್ಬ ಸಂಘಿ ವ್ಯಕ್ತಿ ಇಂತಹ ಸಿನಿಮಾದಲ್ಲಿ ನಟಿಸಲ್ಲ. ಯಾಕೆ ಎಂದು ನಿಮಗೆ ಸಿನಿಮಾ ನೋಡಿದಾಗ ಗೊತ್ತಾಗುತ್ತದೆ. ಈ ಸಿನಿಮಾದಲ್ಲಿ ನಟಿಸಲು ಧೈರ್ಯ ಬೇಕು. ಅಂತಹವರಲ್ಲಿ ನನ್ನ ತಂದೆ ಕೂಡಾ ಒಬ್ಬರು’ ಎಂದಿದ್ದಾರೆ ಐಶ್ವರ್ಯಾ.

ಲಾಲ್ ಸಲಾಂ ಸಿನಿಮಾದ ಪೋಸ್ಟರ್ ಒಂದನ್ನು ಈ ಹಿಂದೆ ಬಿಡುಗಡೆ ಮಾಡಲಾಗಿತ್ತು. ಆ ಪೋಸ್ಟ್ ನಲ್ಲಿ ರಜನೀ ಮುಸ್ಲಿಂ ವ್ಯಕ್ತಿಯ ಪೋಷಾಕಿನಲ್ಲಿದ್ದರು. ಹೀಗಾಗಿ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿಸಿತ್ತು. ರಜನಿ ಅಯೋಧ‍್ಯೆಗೆ ಭೇಟಿ ನೀಡಿದ್ದಕ್ಕೆ ಕಬಾಲಿ ನಿರ್ದೇಶಕ ಪಾ ರಂಜಿತ್  ಕೂಡಾ ಟೀಕೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments