Webdunia - Bharat's app for daily news and videos

Install App

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಜನೀಕಾಂತ್ ಪುತ್ರಿ ಐಶ್ವರ್ಯಾ-ಧನುಷ್

Krishnaveni K
ಸೋಮವಾರ, 8 ಏಪ್ರಿಲ್ 2024 (15:49 IST)
Photo Courtesy: Twitter
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಐಶ್ವರ್ಯಾ ರಜನೀಕಾಂತ್ ಮತ್ತು ನಟ ಧನುಷ್ ಇದೀಗ ಕಾನೂನಾತ್ಮಕವಾಗಿ ದೂರವಾಗುವ ಉದ್ದೇಶದಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಧನುಷ್ ಮತ್ತು ಐಶ್ವರ್ಯಾ ದಂಪತಿ ಕಳೆದ ವರ್ಷವೇ ತಾವಿಬ್ಬರೂ ದೂರವಾಗುತ್ತಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಆದರೆ ಇದುವರೆಗೆ ಇಬ್ಬರೂ ಕೋರ್ಟ್ ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ದಾಂಪತ್ಯ ವಿರಸಕ್ಕೆ ಕಾನೂನಾತ್ಮಕವಾಗಿಯೇ ಮುದ್ರೆ ಒತ್ತಲು ದಂಪತಿ ಕೋರ್ಟ್ ಮೊರೆ ಹೋಗಿದ್ದಾರೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸೆಕ್ಷನ್ 13-ಬಿ ಪ್ರಕಾರ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆಯಲು ಬಯಸುವುದಾಗಿ ಅರ್ಜಿ ಸಲ್ಲಿಸಿದ್ದಾರೆ.

2004 ರಲ್ಲಿ ಧನುಷ್ ಮತ್ತು ಐಶ್ವರ್ಯಾ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಕಳೆದ ಒಂದು ವರ್ಷದಿಂದ ಇಬ್ಬರ ಸಂಬಂಧ ಹಳಸಿತ್ತು. ಇಬ್ಬರಿಗೂ ಈಗ ಇಬ್ಬರು ಮಕ್ಕಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments