ಸುದೀಪ್ ವಿಕ್ರಾಂತ್ ರೋಣಗೆ ಬೆದರಿತಾ ಅಜಯ್ ದೇವಗನ್ ಸಿನಿಮಾ? ರಿಲೀಸ್ ಮುಂದೂಡಿಕೆ

Webdunia
ಶುಕ್ರವಾರ, 27 ಮೇ 2022 (16:08 IST)
ಮುಂಬೈ: ಇತ್ತೀಚೆಗೆ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ಹಿಂದಿ ರಾಷ್ಟ್ರ ಭಾಷೆ ಎಂಬ ಕುರಿತಾಗಿ ಟ್ವೀಟ್ ಸಮರ ನಡೆದಿತ್ತು. ಇದೀಗ ಅಜಯ್ ದೇವಗನ್ ಥ್ಯಾಂಕ್ ಗಾಡ್ ಮತ್ತು ಸುದೀಪ್ ವಿಕ್ರಾಂತ್ ರೋಣ ಒಂದೇ ಸಮಯಕ್ಕೆ ರಿಲೀಸ್ ಆಗುವುದರಲ್ಲಿತ್ತು.

ವಿಕ್ರಾಂತ್ ರೋಣ ಜುಲೈ 28 ರಂದು ಮತ್ತು ಥ್ಯಾಂಕ್ ಗಾಡ್ ಸಿನಿಮಾ ಜುಲೈ 29 ರಂದು ಬಿಡುಗಡೆಯಾಗಬೇಕಿತ್ತು. ಆದರೆ ವಿಕ್ರಾಂತ್ ರೋಣ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಡೇಟ್ ಕ್ಲ್ಯಾಶ್ ಆಗುತ್ತದೆ ಎಂಬ ಕಾರಣಕ್ಕೆ ಅಜಯ್ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಇತ್ತೀಚೆಗೆ ಬಾಲಿವುಡ್ ಮಂದಿ ದಕ್ಷಿಣ ಭಾರತದ ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಭಯಪಡುವಂತಾಗಿದೆ. ಇತ್ತೀಚೆಗೆ ಕೆಜಿಎಫ್ 2 ಹಿಂದಿಯಲ್ಲಿ ಇತರ ಸಿನಿಮಾಗಳನ್ನು ಮಕಾಡೆ ಮಲಗಿಸಿದ್ದು ಇದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಅಜಯ್ ಸಿನಿಮಾವನ್ನೂ ಮುಂದೂಡಲಾಗಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments