Webdunia - Bharat's app for daily news and videos

Install App

ದೊಡ್ಮನೆಯಲ್ಲಿ ಸ್ಪರ್ಧಿಗಳಿಗೆ ಹಿಂಸೆ ಆರೋಪ: ಬಿಗ್‌ಬಾಸ್ ವಿರುದ್ಧವೇ ದೂರು ದಾಖಲು

Sampriya
ಶುಕ್ರವಾರ, 4 ಅಕ್ಟೋಬರ್ 2024 (19:17 IST)
Photo Courtesy X
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರು ಕಿರುತೆರೆಯ ಅತ್ಯಂತ ದೊಡ್ಡ ಶೋ ಬಿಗ್‌ಬಾಸ್ ಸೀಸನ್ 11ರಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಇದೀಗ ಎರಡು ದೂರು ದಾಖಲಾಗಿದೆ.   ಕಳೆದ ಬಿಗ್‌ಬಾಸ್ ಸೀಸನ್‌ನಲ್ಲಿ ಹುಲಿ ಉಗುರು ವಿಚಾರವಾಗಿ ವರ್ತೂರ್ ಸಂತೋಷ್ ಅವರನ್ನು ವಶಕ್ಕೆ ಪಡೆಯಲಾಯಿತು. ಪ್ರತಿ ಸೀಸನ್ ಕೂಡಾ ಒಂದಿಲ್ಲೊಂದು ವಿವಾದಕ್ಕೆ ಕಾರಣವಾಗಿದೆ. ಈ ಬಾರಿ ಸ್ಪರ್ಧಿಗಳಿಗೆ ಬದುಕಲು ಬೇಕಾಗಿರುವ ಅಗತ್ಯ ವಸ್ತು ಹಾಗೂ ಸ್ವಾತಂತ್ರ್ಯವನ್ನು ನೀಡದೆ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪ ವ್ಯಕ್ತವಾಗಿದೆ.

ಮಾನವ ಹಕ್ಕುಗಳ ಉಲ್ಲಂಘನೆಯಡಿಯಲ್ಲಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎನ್ನುವವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಟ್ಟಿದ್ದಾರೆ.  ವಕೀಲೆ ರಕ್ಷಿತಾ ಸಿಂಗ್ ಅವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದೂರು ನೀಡಿದ್ದಾರೆ.

ರಕ್ಷಿತಾ ಸಿಂಗ್ ನೀಡಿರುವ ದೂರಿನಲ್ಲಿ, ಬಿಗ್ ಬಾಸ್ ಸೀಸನ್ 11 ಶೋನಲ್ಲಿ ಸ್ವರ್ಗ ಹಾಗೂ ನರಕ ಪರಿಕಲ್ಪನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.  ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸಲು ಹಕ್ಕನ್ನು ಹೊಂದಿರುವುದಿಲ್ಲ ಎಂದು ದೂರಿದ್ದಾರೆ.

ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಜೈಲಿನ ಮಾದರಿಯಲ್ಲಿರುವ ಬಂಧಿಖಾನೆಯಂತಹ ಕೊಠಡಿಯಲ್ಲಿ ಹತ್ತಾರು ಕ್ಯಾಮೆರಾಗಳಲ್ಲಿ ಚಿತ್ರೀಕರಣವಾಗುವಂತೆ ಅಕ್ರಮವಾಗಿ ಬಂಧನದಲ್ಲಿಡಲಾಗಿದೆ. ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವನ್ನಾಗಿ ನೀಡುತ್ತಿದ್ದು, ಸಂವಿಧಾನದ ಪ್ರಕಾರ ನಾಗರಿಕರಿಗೆ ಪೌಷ್ಠಿಕ ಆಹಾರ ಕೊಡದೇ ಇರುವುದು ಅಪರಾಧವಾಗುತ್ತದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments