Webdunia - Bharat's app for daily news and videos

Install App

Allu Arjun arrested: ಅಲ್ಲು ಅರ್ಜುನ್ ರನ್ನು ಪೊಲೀಸರು ಪ್ಲ್ಯಾನ್ ಮಾಡಿ ಇಂದೇ ಅರೆಸ್ಟ್ ಮಾಡಿದ್ರಾ

Krishnaveni K
ಶುಕ್ರವಾರ, 13 ಡಿಸೆಂಬರ್ 2024 (14:56 IST)
ಹೈದರಾಬಾದ್: ಅಭಿಮಾನಿ ಸಾವಿಗೆ ಕಾರಣರಾದ ಹಿನ್ನಲೆಯಲ್ಲಿ ಅರೆಸ್ಟ್ ಆಗಿರುವ ನಟ ಅಲ್ಲು ಅರ್ಜುನ್ ಬಂಧನದ ಸಮಯದ ಬಗ್ಗೆ ಈಗ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ಲ್ಯಾನ್ ಮಾಡಿಕೊಂಡೇ ಪೊಲೀಸರು ಇಂದು ಬಂಧಿಸಿದ್ದಾರಾ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 4 ರಂದು ಪುಷ್ಪ 2 ರಿಲೀಸ್ ಆಗಿದ್ದ ಸಂಧ್ಯಾ ಥಿಯೇಟರ್ ಗೆ ಅಲ್ಲು ಅರ್ಜುನ್ ಭೇಟಿಕೊಟ್ಟಿದ್ದರು. ಈ ವೇಳೆ ನಟನನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೂಕುನುಗ್ಗಲು ನಡೆಸಿದ್ದರು. ಈ ಸಂದರ್ಭದಲ್ಲಿ ಕಾಲ್ತುಳಿತದಿಂದಾಗಿ ರೇವತಿ ಎನ್ನುವ ಮಹಿಳೆ ಸಾವನ್ನಪ್ಪಿದ್ದರೆ ಆಕೆಯ ಪುತ್ರ ಗಂಭೀರ ಗಾಯಗೊಂಡಿದ್ದ.

ಘಟನೆ ಸಂಬಂಧ ಅಂದೇ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಆದರೆ ಪೊಲೀಸರು ಬರೋಬ್ಬರಿ 9 ದಿನಗಳ ನಂತರ ಅಲ್ಲು ಅರ್ಜುನ್ ರನ್ನು ಬಂಧಿಸಿದ್ದಾರೆ. ಇದಕ್ಕೆ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಪೊಲೀಸರು ಕಾರಣವನ್ನೂ ನೀಡಿದ್ದಾರೆ.

ಹಾಗಿದ್ದರೂ ಅಭಿಮಾನಿಗಳಿಗೆ ಮಾತ್ರ ಪೊಲೀಸರ ನಡೆ ಮೇಲೆ ಸಂಶಯ ಮೂಡಿದೆ. ಯಾಕೆಂದರೆ ನಾಳೆ ಎರಡನೇ ಶನಿವಾರವಾಗಿದ್ದು ಕೋರ್ಟ್ ರಜೆಯಿರುತ್ತದೆ. ಇಂದು ವೈದ್ಯಕೀಯ ಪರೀಕ್ಷೆ ಮುಗಿದ ಬಳಿಕ ಅಲ್ಲು ಅರ್ಜುನ್ ರನ್ನು ಕೋರ್ಟ್ ಗೆ ಹಾಜರುಪಡಿಸಬೇಕು. ಒಂದು ವೇಳೆ ಇಂದು ಅವರಿಗೆ ಕೋರ್ಟ್ ಜಾಮೀನು ನೀಡದೇ ಇದ್ದರೆ ಸೋಮವಾರದವರೆಗೂ ಅವರು ಜೈಲಿನಲ್ಲಿ ಕಳೆಯಬೇಕು. ಇದಕ್ಕಾಗಿಯೇ ಅವರನ್ನು ಇಂದು ಅರೆಸ್ಟ್ ಮಾಡಿಸಿದರಾ ಎಂದು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments