ಅಲ್ಲು ಅರ್ಜುನ್ ಬಂಧನದ ವೇಳೆ ಹೈಡ್ರಾಮಾ, ಪತ್ನಿ, ತಂದೆ ಕಣ್ಣೀರು: ವಿಡಿಯೋ

Krishnaveni K
ಶುಕ್ರವಾರ, 13 ಡಿಸೆಂಬರ್ 2024 (13:27 IST)
Photo Credit: X
ಹೈದರಾಬಾದ್: ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಷ್ಪ ನಟ ಅಲ್ಲು ಅರ್ಜುನ್ ರನ್ನು ಪೊಲೀಸರು ಬಂದಿಸುವ ವೇಳೆ ಹೈಡ್ರಾಮಾವೇ ನಡೆದಿದೆ.

ಅಲ್ಲು ಅರ್ಜುನ್ ಮನೆಗೆ ಬಂದ ಪೊಲೀಸರು ಇಂದು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಈ ವೇಳೆ ಅವರ ಮನೆ ಮುಂದೆ ಹೈಡ್ರಾಮಾವೇ ನಡೆದಿದೆ. ಅಲ್ಲು ಅರ್ಜುನ್ ರನ್ನು ಬಂಧಿಸಿ ಪೊಲೀಸರು ತಮ್ಮ ವಾಹನದಲ್ಲಿ ಕುಳ್ಳಿರಿಸಲು ಹೋದಾಗ ಅವರ ಪತ್ನಿ, ತಂದೆ ಸೇರಿದಂತೆ ಸಾಕಷ್ಟು ಜನ ಸೇರಿದ್ದರು.

ಕಣ್ಣೀರಿಡುತ್ತಿದ್ದ ಪತ್ನಿಯ ಕಣ್ಣೊರೆಸಿ ಮುತ್ತಿಕ್ಕಿದ ಅಲ್ಲು ಅರ್ಜುನ್ ಇನ್ನೇನು ಕಾರಿನಲ್ಲಿ ಕೂರಬೇಕು ಎಂದಾಗ ತಂದೆ ಅಲ್ಲು ಅರವಿಂದ್ ತಾವೇ ಕಾರಿನಲ್ಲಿ ಕೂತರು. ಆಗ ಅವರೆಲ್ಲರನ್ನೂ ಸಮಾಧಾನ ಮಾಡಿ ಏನೂ ಆಗಲ್ಲ ಎಂದು ಧೈರ್ಯ ಹೇಳಿ ಹಿಂದೆ ಕಳುಹಿಸಿಕೊಟ್ಟ ಅರ್ಜುನ್ ಪೊಲೀಸರ ಜೊತೆ ತೆರಳಿದ್ದಾರೆ.

ಕಾರಿನ ಹಿಂದೆಯೇ ಅವರ ಆಪ್ತರೂ ಓಡಿ ಹೋಗಿದ್ದಾರೆ. ಮೊನ್ನೆಯಷ್ಟೇ ಪುಷ್ಪ 2 ರಿಲೀಸ್ ವೇಳೆ ಸಂಧ್ಯಾ ಥಿಯೇಟರ್ ಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ಉಂಟಾಗಿದ್ದ ನೂಕು ನುಗ್ಗಲಿನಿಂದಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದಳು. ಪ್ರಕರಣ ಸಂಬಂಧ ಅಲ್ಲು ವಿರುದ್ಧ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಅಲ್ಲು ಹಾಜರಾಗದ ಕಾರಣ ಪೊಲೀಸರು ಇಂದು ಅವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments