Webdunia - Bharat's app for daily news and videos

Install App

ಅಲ್ಲು ಅರ್ಜುನ್ ಬಂಧನದ ವೇಳೆ ಹೈಡ್ರಾಮಾ, ಪತ್ನಿ, ತಂದೆ ಕಣ್ಣೀರು: ವಿಡಿಯೋ

Krishnaveni K
ಶುಕ್ರವಾರ, 13 ಡಿಸೆಂಬರ್ 2024 (13:27 IST)
Photo Credit: X
ಹೈದರಾಬಾದ್: ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಷ್ಪ ನಟ ಅಲ್ಲು ಅರ್ಜುನ್ ರನ್ನು ಪೊಲೀಸರು ಬಂದಿಸುವ ವೇಳೆ ಹೈಡ್ರಾಮಾವೇ ನಡೆದಿದೆ.

ಅಲ್ಲು ಅರ್ಜುನ್ ಮನೆಗೆ ಬಂದ ಪೊಲೀಸರು ಇಂದು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಈ ವೇಳೆ ಅವರ ಮನೆ ಮುಂದೆ ಹೈಡ್ರಾಮಾವೇ ನಡೆದಿದೆ. ಅಲ್ಲು ಅರ್ಜುನ್ ರನ್ನು ಬಂಧಿಸಿ ಪೊಲೀಸರು ತಮ್ಮ ವಾಹನದಲ್ಲಿ ಕುಳ್ಳಿರಿಸಲು ಹೋದಾಗ ಅವರ ಪತ್ನಿ, ತಂದೆ ಸೇರಿದಂತೆ ಸಾಕಷ್ಟು ಜನ ಸೇರಿದ್ದರು.

ಕಣ್ಣೀರಿಡುತ್ತಿದ್ದ ಪತ್ನಿಯ ಕಣ್ಣೊರೆಸಿ ಮುತ್ತಿಕ್ಕಿದ ಅಲ್ಲು ಅರ್ಜುನ್ ಇನ್ನೇನು ಕಾರಿನಲ್ಲಿ ಕೂರಬೇಕು ಎಂದಾಗ ತಂದೆ ಅಲ್ಲು ಅರವಿಂದ್ ತಾವೇ ಕಾರಿನಲ್ಲಿ ಕೂತರು. ಆಗ ಅವರೆಲ್ಲರನ್ನೂ ಸಮಾಧಾನ ಮಾಡಿ ಏನೂ ಆಗಲ್ಲ ಎಂದು ಧೈರ್ಯ ಹೇಳಿ ಹಿಂದೆ ಕಳುಹಿಸಿಕೊಟ್ಟ ಅರ್ಜುನ್ ಪೊಲೀಸರ ಜೊತೆ ತೆರಳಿದ್ದಾರೆ.

ಕಾರಿನ ಹಿಂದೆಯೇ ಅವರ ಆಪ್ತರೂ ಓಡಿ ಹೋಗಿದ್ದಾರೆ. ಮೊನ್ನೆಯಷ್ಟೇ ಪುಷ್ಪ 2 ರಿಲೀಸ್ ವೇಳೆ ಸಂಧ್ಯಾ ಥಿಯೇಟರ್ ಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ಉಂಟಾಗಿದ್ದ ನೂಕು ನುಗ್ಗಲಿನಿಂದಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದಳು. ಪ್ರಕರಣ ಸಂಬಂಧ ಅಲ್ಲು ವಿರುದ್ಧ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಅಲ್ಲು ಹಾಜರಾಗದ ಕಾರಣ ಪೊಲೀಸರು ಇಂದು ಅವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments