Webdunia - Bharat's app for daily news and videos

Install App

ಅಲ್ಲು ಅರ್ಜುನ್ ರಿಲೀಸ್ ಬಳಿಕ ಸೆಲೆಬ್ರೇಷನ್ ಬೇಕಿತ್ತಾ, ಕೇಳಿ ಬಂತು ಅಪಸ್ವರ

Krishnaveni K
ಭಾನುವಾರ, 15 ಡಿಸೆಂಬರ್ 2024 (10:09 IST)
ಹೈದರಾಬಾದ್: ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ತಮ್ಮ ಸಿನಿ ಸ್ನೇಹಿತರು, ಕುಟುಂಬಸ್ಥರ ಜೊತೆ ಸೆಲಬ್ರೇಷನ್ ಮಾಡಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಧ್ಯಾ ಥಿಯೇಟರ್ ಗೆ ಅಲ್ಲು ಅರ್ಜುನ್ ಭೇಟಿ ವೇಳೆ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದರೆ ಆಕೆಯ ಪುತ್ರ ಗಂಭೀರ ಗಾಯಗೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಲು ಅರ್ಜುನ್ ರನ್ನು ಬಂಧಿಸಲಾಗಿತ್ತು. ಬಂಧನವಾಗಿ ಒಂದೇ ದಿನದಲ್ಲಿ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಬಿಡುಗಡೆ ಬಳಿಕ ಅವರು ತಮ್ಮ ಮನೆಗೆ ಬಂದು ಕುಟುಂಬಸ್ಥರೊಂದಿಗೆ ಸಂಭ್ರಮಾಚರಿಸಿದ್ದಾರೆ. ಮಾಧ್ಯಮ ಗೋಷ್ಠಿ ನಡೆಸಿ ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಆದರೆ ಸಿನಿ ಸ್ನೇಹಿತರೊಂದಿಗೆ ಅಲ್ಲು ಅರ್ಜುನ್ ಸಂಭ್ರಮಾಚರಿಸಿದ್ದರು ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಅವರ ಭೇಟಿ  ವೇಳೆ ಓರ್ವ ಮಹಿಳೆ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಅಪ್ರಾಪ್ತ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಸೆಲೆಬ್ರೇಷನ್ ಬೇಕಿತ್ತಾ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಅಪಸ್ವರವೆತ್ತಿದ್ದಾರೆ. ಸ್ವಲ್ಪವಾದರೂ ಮಾನವೀಯತೆ ಬೇಡವೇ? ತಮ್ಮಿಂದಾಗಿ ಓರ್ವ ಆಸ್ಪತ್ರೆಯಲ್ಲಿ ಮಲಗಿಕೊಂಡಿರುವಾಗ ಇಂತಹ ಸಂಭ್ರಮಾಚರಣೆ ಯಾಕೆ ಬೇಕಿತ್ತು ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments