Webdunia - Bharat's app for daily news and videos

Install App

ತದ್ರೂಪಿನ ಮುಂದೆ ಫೋಟೋ ತೆಗೆಸಿಕೊಂಡ ಅಲ್ಲು ಅರ್ಜುನ್

Krishnaveni K
ಶುಕ್ರವಾರ, 29 ಮಾರ್ಚ್ 2024 (12:21 IST)
Photo Courtesy: Twitter
ದುಬೈ: ಪುಷ್ಪ ಸಿನಿಮಾ ಬಳಿಕ ನಟ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಾಗಿದೆ. ಇದೀಗ ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅವರ ತದ್ರೂಪು ಮೇಣದ ಪ್ರತಿಮೆ ಸ್ಥಾಪಿಸಲಾಗಿದೆ.

ಖ್ಯಾತ ಸೆಲೆಬ್ರಿಟಿಗಳ ತದ್ರೂಪಿನ ಪ್ರತಿಮೆಗಳನ್ನು ಈ ಮ್ಯೂಸಿಯಂನಲ್ಲಿ ಇರಿಸಲಾಗಿದೆ. ಭಾರತದ ಹಲವು ತಾರೆಯರು ಇಲ್ಲಿ ಗೌರವ ಪಡೆದಿದ್ದಾರೆ. ಇದೀಗ ಅಲ್ಲು ಅರ್ಜುನ್ ಪ್ರತಿಮೆಯನ್ನೂ ಸ್ಥಾಪಿಸಲಾಗಿದೆ. ಇದೀಗ ಈ ಪ್ರತಿಮೆಯನ್ನು ಅಲ್ಲು ಅರ್ಜುನ್ ಅನಾವರಣಗೊಳಿಸಿದರು.

ಕೆಂಪು ಸೂಟ್ ಧರಿಸಿದ ಅಲ್ಲು ಅರ್ಜುನ್ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ವಿಶೇಷವೆಂದರೆ ಅನಾವರಣ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್ ಕೂಡಾ ಅದೇ ರೀತಿ ಡ್ರೆಸ್ ಮಾಡಿಕೊಂಡು ಬಂದಿದ್ದರು. ಪ್ರತಿಮೆ ಮುಂದೆ ಅಲ್ಲು ಅರ್ಜುನ್ ಪೋಸ್ ಕೊಟ್ಟಾಗ ಇವರಲ್ಲಿ ಯಾರು ನಿಜವಾದ ಅಲ್ಲು ಅರ್ಜುನ್ ಎಂದು ಎಲ್ಲರೂ ಕನ್ ಫ್ಯೂಸ್ ಮಾಡುವಷ್ಟು ಸೇಮ್ ಟು ಸೇಮ್ ಕಾಣಿಸಿದ್ದಾರೆ.

ಪ್ರತಿಮೆ ಉದ್ಘಾಟನೆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಲ್ಲು ಅರ್ಜುನ್ ‘ಇದು ನಿಜಕ್ಕೂ ವಿಶೇಷ ದಿನ. ನನ್ನ ಮೊದಲ ಸಿನಿಮಾ ಗಂಗೋತ್ರಿ ಬಿಡುಗಡೆಯಾದ ದಿನವಿಂದು. ಇಂದೇ ದುಬೈನಲ್ಲಿ ನನ್ನ ಪ್ರತಿಮೆ ಅನಾವರಣಗೊಳಿಸುತ್ತಿದ್ದೇನೆ. ಇದು 21 ವರ್ಷಗಳ ಅವಿಸ್ಮರಣೀಯ ಪಯಣ. ಈ ಪಯಣದಲ್ಲಿ ಜೊತೆಯಾದ ನನ್ನೆಲ್ಲಾ ಫ್ಯಾನ್ಸ್, ಸ್ನೇಹಿತರು, ಕುಟುಂಬದವರಿಗೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments