Webdunia - Bharat's app for daily news and videos

Install App

ತದ್ರೂಪಿನ ಮುಂದೆ ಫೋಟೋ ತೆಗೆಸಿಕೊಂಡ ಅಲ್ಲು ಅರ್ಜುನ್

Krishnaveni K
ಶುಕ್ರವಾರ, 29 ಮಾರ್ಚ್ 2024 (12:21 IST)
Photo Courtesy: Twitter
ದುಬೈ: ಪುಷ್ಪ ಸಿನಿಮಾ ಬಳಿಕ ನಟ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಾಗಿದೆ. ಇದೀಗ ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅವರ ತದ್ರೂಪು ಮೇಣದ ಪ್ರತಿಮೆ ಸ್ಥಾಪಿಸಲಾಗಿದೆ.

ಖ್ಯಾತ ಸೆಲೆಬ್ರಿಟಿಗಳ ತದ್ರೂಪಿನ ಪ್ರತಿಮೆಗಳನ್ನು ಈ ಮ್ಯೂಸಿಯಂನಲ್ಲಿ ಇರಿಸಲಾಗಿದೆ. ಭಾರತದ ಹಲವು ತಾರೆಯರು ಇಲ್ಲಿ ಗೌರವ ಪಡೆದಿದ್ದಾರೆ. ಇದೀಗ ಅಲ್ಲು ಅರ್ಜುನ್ ಪ್ರತಿಮೆಯನ್ನೂ ಸ್ಥಾಪಿಸಲಾಗಿದೆ. ಇದೀಗ ಈ ಪ್ರತಿಮೆಯನ್ನು ಅಲ್ಲು ಅರ್ಜುನ್ ಅನಾವರಣಗೊಳಿಸಿದರು.

ಕೆಂಪು ಸೂಟ್ ಧರಿಸಿದ ಅಲ್ಲು ಅರ್ಜುನ್ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ವಿಶೇಷವೆಂದರೆ ಅನಾವರಣ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್ ಕೂಡಾ ಅದೇ ರೀತಿ ಡ್ರೆಸ್ ಮಾಡಿಕೊಂಡು ಬಂದಿದ್ದರು. ಪ್ರತಿಮೆ ಮುಂದೆ ಅಲ್ಲು ಅರ್ಜುನ್ ಪೋಸ್ ಕೊಟ್ಟಾಗ ಇವರಲ್ಲಿ ಯಾರು ನಿಜವಾದ ಅಲ್ಲು ಅರ್ಜುನ್ ಎಂದು ಎಲ್ಲರೂ ಕನ್ ಫ್ಯೂಸ್ ಮಾಡುವಷ್ಟು ಸೇಮ್ ಟು ಸೇಮ್ ಕಾಣಿಸಿದ್ದಾರೆ.

ಪ್ರತಿಮೆ ಉದ್ಘಾಟನೆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಲ್ಲು ಅರ್ಜುನ್ ‘ಇದು ನಿಜಕ್ಕೂ ವಿಶೇಷ ದಿನ. ನನ್ನ ಮೊದಲ ಸಿನಿಮಾ ಗಂಗೋತ್ರಿ ಬಿಡುಗಡೆಯಾದ ದಿನವಿಂದು. ಇಂದೇ ದುಬೈನಲ್ಲಿ ನನ್ನ ಪ್ರತಿಮೆ ಅನಾವರಣಗೊಳಿಸುತ್ತಿದ್ದೇನೆ. ಇದು 21 ವರ್ಷಗಳ ಅವಿಸ್ಮರಣೀಯ ಪಯಣ. ಈ ಪಯಣದಲ್ಲಿ ಜೊತೆಯಾದ ನನ್ನೆಲ್ಲಾ ಫ್ಯಾನ್ಸ್, ಸ್ನೇಹಿತರು, ಕುಟುಂಬದವರಿಗೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments