Publish Date: Fri, 30 Sep 2022 (17:12 IST)
Updated Date: Fri, 30 Sep 2022 (17:14 IST)
ನವದೆಹಲಿ: ಉತ್ತರ ಭಾರತ ಪ್ರವಾಸದಲ್ಲಿರುವ ನಟ ಅಲ್ಲು ಅರ್ಜುನ್ ವಾಘಾ ಗಡಿಗೆ ಪತ್ನಿ, ಮಕ್ಕಳೊಂದಿಗೆ ಭೇಟಿ ಮಾಡಿದ್ದಾರೆ.
ನಿನ್ನೆಯಷ್ಟೇ ಅಲ್ಲು ಅರ್ಜುನ್ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಇದೀಗ ವಾಘಾ ಗಡಿಯಲ್ಲಿ ಭಾರತೀಯ ಯೋಧರನ್ನು ಭೇಟಿ ಮಾಡಿದ್ದು, ಅವರೊಂದಿಗೆ ಫೋಟೋ ಸೆಷನ್ ಕೂಡಾ ಮಾಡಿದ್ದಾರೆ. ಪುಷ್ಪ 2 ಸಿನಿಮಾ ಶೂಟಿಂಗ್ ತಡವಾಗಿರುವ ಹಿನ್ನಲೆಯಲ್ಲಿ ಅಲ್ಲು ಅರ್ಜುನ್ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.