Webdunia - Bharat's app for daily news and videos

Install App

ಜೈಲಿನಿಂದ ರಿಲೀಸ್ ಆದ ಅಲ್ಲು ಅರ್ಜುನ್ ರನ್ನು ಪತ್ನಿ, ಮಕ್ಕಳು ಬರಮಾಡಿಕೊಂಡ ವಿಡಿಯೋ ವೈರಲ್

Krishnaveni K
ಶನಿವಾರ, 14 ಡಿಸೆಂಬರ್ 2024 (10:04 IST)
Photo Credit: Instagram
ಹೈದರಾಬಾದ್: ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಕಾರಣಕ್ಕೆ ನಿನ್ನೆ ಬಂಧಿತರಾಗಿದ್ದ ನಟ ಅಲ್ಲು ಅರ್ಜುನ್ ಇಂದು ಮುಂಜಾನೆಯೇ ಬಿಡುಗಡೆಯಾಗಿದ್ದಾರೆ. ಅವರು ರಿಲೀಸ್ ಆಗಿ ಮನೆಗೆ ಬಂದಾಗ ಅವರನ್ನು ಬರಮಾಡಿಕೊಂಡ ವಿಡಿಯೋ ಈಗ ವೈರಲ್ ಆಗಿದೆ.

ಪುಷ್ಪ 2 ರಿಲೀಸ್ ಆದಾಗ ಸಂಧ್ಯಾ ಥಿಯೇಟರ್ ಗೆ ಬಂದಿದ್ದ ಅಲ್ಲು ಅರ್ಜುನ್ ನನ್ನು ನೋಡಲು ಜನ ನೂಕುನುಗ್ಗಲು ನಡೆಸಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದಳು. ಡಿಸೆಂಬರ್ 4 ರಂದು ಪ್ರಕರಣ ನಡೆದಿತ್ತು. ಈ ಘಟನೆ ಬಗ್ಗೆ ಮಹಿಳೆಯ ಪತಿ ದೂರು ನೀಡಿದ್ದರು. ಅದರಂತೆ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಾಗಿತ್ತು.

ನಿನ್ನೆ ಅಲ್ಲು ಅರ್ಜುನ್ ರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮಧ್ಯಂತರ ಜಾಮೀನು ಸಿಕ್ಕ ಹಿನ್ನಲೆಯಲ್ಲಿ ನಿನ್ನೆ ಒಂದು ರಾತ್ರಿ ಜೈಲಿನಲ್ಲಿ ಕಳೆದಿದ್ದ ಅಲ್ಲು ಇಂದು ಮುಂಜಾನೆಯೇ ರಿಲೀಸ್ ಆಗಿ ಮನೆಗೆ ಬಂದಿದ್ದಾರೆ. ಅವರನ್ನು ಪೊಲೀಸರು ಅರೆಸ್ಟ್ ಮಾಡಿದಾಗ ಪತ್ನಿ ಸ್ನೇಹ ರೆಡ್ಡಿ ಕಣ್ಣೀರು ಹಾಕಿದ್ದರು.

ಇಂದು ಅಲ್ಲು ಮನೆಗೆ ಬರುವಾಗ ಅವರನ್ನು ಬರಮಾಡಿಕೊಳ್ಳಲು ಪತ್ನಿ ಸ್ನೇಹ ರೆಡ್ಡಿ, ಇಬ್ಬರು ಮಕ್ಕಳು, ಸಹೋದರ ಅಲ್ಲು ಸಿರೀಶ್ ಸೇರಿದಂತೆ ಕುಟುಂಬಸ್ಥರು ಗೇಟಿನ ಬಳಿಯೇ ಕಾದು ನಿಂತಿದ್ದರು. ಅಲ್ಲು ಕಾರಿನಿಂದ ಇಳಿಯುತ್ತಿದ್ದಂತೇ ಮೊದಲು ಸಹೋದರ ಬಂದು ಅಪ್ಪಿ ಸ್ವಾಗತಿಸಿದರೆ ಬಳಿಕ ಮಗ, ಪತ್ನಿ, ಮಗಳು ಹೀಗೆ ಪ್ರತಿಯೊಬ್ಬರೂ ಬಂದು ಅಪ್ಪಿ ಹಿಡಿದು ಸಂಭ್ರಮಿಸಿದ್ದಾರೆ. ಬಳಿಕ ಅಲ್ಲು ಮಾಧ್ಯಮಗಳ ಮುಂದೆ ಕೈಮುಗಿದು ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments