Webdunia - Bharat's app for daily news and videos

Install App

ಅಂಬರೀಶ್ ಸಮಾಧಿಯಲ್ಲಿ ಇಂದು ಕುಟುಂಬಸ್ಥರಿಂದ ಮೂರನೇ ದಿನದ ಕಾರ್ಯ

Webdunia
ಬುಧವಾರ, 28 ನವೆಂಬರ್ 2018 (09:27 IST)
ಬೆಂಗಳೂರು: ಶನಿವಾರ ನಿಧನರಾದ ಹಿರಿಯ ನಟ ಅಂಬರೀಶ್ ಸಮಾಧಿಯಲ್ಲಿ ಇಂದು ಕುಟುಂಬಸ್ಥರು ಹಾಲು ತುಪ್ಪ ಬಿಡುವ ಕಾರ್ಯಕ್ರಮ ಮತ್ತು ಚಿತಾಭಸ್ಮ ಸಂಗ್ರಹ ಮಾಡಲಿದ್ದಾರೆ.


ಅಂಬರೀಶ್ ಚಿತಾಭಸ್ಮವನ್ನು ಶ್ರೀರಂಗಪಟ್ಟಣದಲ್ಲಿ ವಿಸರ್ಜಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಹೀಗಾಗಿ ಇಂದು ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಕುಟುಂಬಸ್ಥರು, ಆಪ್ತರು ಬಂದು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿ ಬಳಿ ಮೂರನೇ ದಿನದ ಕಾರ್ಯ ನೆರವೇರಿಸಲಿದ್ದಾರೆ.

ನಿನ್ನೆಯೂ ಅಂಬರೀಶ್ ಸಮಾಧಿ ನೋಡಲು ಅಭಿಮಾನಿಗಳು ಸಾಲುಗಟ್ಟಿ ಆಗಮಿಸಿದ್ದರು. ನಿನ್ನೆ ನಟ ದರ್ಶನ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಆಪ್ತರು ಅಂಬಿ ಸಮಾಧಿಗೆ ಭೇಟಿ ನೀಡಿದ್ದರು.

 ಈ ನಡುವೆ ಸರ್ಕಾರ ನಿರ್ಮಿಸಲುದ್ದೇಶಿಸಿರುವ ಅಂಬರೀಶ್ ಸಮಾಧಿ ನಿರ್ಮಾಣ ಕೆಲಸಗಳು ಭರದಿಂದ ಸಾಗಿದ್ದು, ಈಗಾಗಲೇ ನೀಲ ನಕ್ಷೆ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಸಮಾಧಿ ನಿರ್ಮಿಸಲಾಗುವುದು ಎಂದು ಈಗಾಗಲೇ ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments