ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

Krishnaveni K
ಮಂಗಳವಾರ, 29 ಜುಲೈ 2025 (09:26 IST)
Photo Credit: Instagram
ಬೆಂಗಳೂರು: ಮದುವೆಯಾಗಿ ಅವಳಿ ಮಕ್ಕಳ ತಾಯಿಯಾದ ಮೇಲೆ ಚೆಲುವಿನ ಚಿತ್ತಾರ ನಟಿ ಅಮೂಲ್ಯ ಬಣ್ಣದ ಲೋಕದಿಂದ ದೂರವೇ ಉಳಿದರು. ಆದರೆ ಈಗ ಕಿರುತೆರೆ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ನಟಿ ಅಮೂಲ್ಯ 2017 ರಲ್ಲಿ ಮುಗುಳು ನಗೆ ಎನ್ನುವ ಸಿನಿಮಾದಲ್ಲಿ ನಟಿಸಿದ್ದೇ ಕೊನೆ. ಅದಾದ ಬಳಿಕ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು. ಇಬ್ಬರು ಅವಳಿ ಮಕ್ಕಳಿಗೆ ಅಮ್ಮನಾದ ಮೇಲೆ ಅಮೂಲ್ಯ ಸಿನಿಮಾದಲ್ಲಿ ಕಾಣಿಸಿಕೊಳ್ಳಲೇ ಇಲ್ಲ.

ಆದರೆ ಈಗ ರಿಯಾಲಿಟಿ ಶೋ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅಮೂಲ್ಯ ರಿಯಾಲಿಟಿ ಶೋ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ನಾವು ನಮ್ಮವರು ಎನ್ನುವ ಶೋಗೆ ತೀರ್ಪುಗಾರರಲ್ಲಿ ಅಮೂಲ್ಯ ಕೂಡಾ ಒಬ್ಬರು.

ಅಮೂಲ್ಯ ಜೊತೆಗೆ ಹಿರಿಯ ನಟಿ ತಾರಾ, ಶರಣ್ ತೀರ್ಪುಗಾರರಾಗಲಿದ್ದಾರೆ. ಅಮೂಲ್ಯ ಜಡ್ಜ್ ಆಗಿರುವುದಕ್ಕೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾವು ನಮ್ಮವರು ಎನ್ನುವುದು ಸಂಬಂಧಗಳನ್ನು ಕೂಡಿಸುವ ಶೋ. ಅಮೂಲ್ಯ ತಮ್ಮ ಕುಟುಂಬಕ್ಕೆ ತುಂಬಾ ಬೆಲೆ ಕೊಡುತ್ತಾರೆ. ಹೀಗಾಗಿ ಈ ಶೋಗೆ ಅಮೂಲ್ಯ ಬೆಸ್ಟ್ ಆಯ್ಕೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments