Select Your Language

Notifications

webdunia
webdunia
webdunia
webdunia

ಕಿನಾರೆ ಚಿತ್ರದ ಐಟಂ ಸಾಂಗ್ ನೃತ್ಯದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ; ಚಿತ್ರದ ನಿರ್ದೇಶಕನ ಕಾರಿನ ಗಾಜುಗಳನ್ನು ಒಡೆದ ಕಿಡಿಗೇಡಿಗಳು

ಕಿನಾರೆ ಚಿತ್ರದ ಐಟಂ ಸಾಂಗ್ ನೃತ್ಯದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ; ಚಿತ್ರದ ನಿರ್ದೇಶಕನ ಕಾರಿನ ಗಾಜುಗಳನ್ನು ಒಡೆದ ಕಿಡಿಗೇಡಿಗಳು
ಬೆಂಗಳೂರು , ಮಂಗಳವಾರ, 2 ಅಕ್ಟೋಬರ್ 2018 (11:08 IST)
ಬೆಂಗಳೂರು : ಶುಕ್ರವಾರ ತೆರೆಕಂಡ ಕಿನಾರೆ ಚಿತ್ರದ ಹಾಡೊಂದು ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ ಎಂಬ ಆರೋಪ ಕೇಳಿಬಂದಿದೆ.


ಹೌದು. ಕಿನಾರೆ ಸಿನಿಮಾದಲ್ಲಿ ಯೋಗರಾಜ್ ಭಟ್ ಮತ್ತು ವಿಜಯ್ ಪ್ರಕಾಶ್ ಹಾಡಿರುವ ಐಟಂ ಸಾಂಗ್ ವೊಂದರ ನೃತ್ಯದ ದೃಶ್ಯಕ್ಕೆ ‘ಓಂ’ ಚಿತ್ರ ಇರುವ ಬಾವುಟಗಳನ್ನು ಬಳಸಲಾಗಿದೆ. ಇದು ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡಿದೆ ಎನ್ನಲಾಗಿದೆ.
ಹಾಗಾಗಿ ಈ ಹಾಡನ್ನು ತೆಗೆದುಹಾಕಿ ಎಂದು ಹೇಳಿಕೊಂಡು ಚಿತ್ರದ ನಿರ್ದೇಶಕ ದೇವರಾಜ್ ಪೂಜಾರಿ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ಮಾಡಿ ಅವರ ಕಾರಿನ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಶೆಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಯುಎಸ್ ಬಾಕ್ಸ್ ಆಫೀಸ್‍ನಲ್ಲಿ ಗಳಿಸಿದೆಷ್ಟು ಗೊತ್ತಾ?