ಕಂಡ ಕನಸಿನಂತೆ ಮತ್ತೆ ಹಸೆಮಣೆಯೇರಿದ ನಿರೂಪಕಿ ಚೈತ್ರಾ ವಾಸುದೇವನ್

Sampriya
ಭಾನುವಾರ, 2 ಮಾರ್ಚ್ 2025 (12:29 IST)
Photo Courtesy X
ಬೆಂಗಳೂರು: ಕನ್ನಡದ ಬಿಗ್‌ ಬಾಸ್‌ನ ಏಳನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ಖ್ಯಾತ ನಿರೂಪಕಿ ಹಸೆಮಣೆಯೇರಿದ್ದಾರೆ. ಉದ್ಯಮಿ ಜಗದೀಪ್ ಜೊತೆ ಅವರು ತಮ್ಮ ಎರಡನೇ ಮದುವೆಯನ್ನು ಅದ್ಧೂರಿಯಾಗಿ ಮಾಡಿಕೊಂಡಿದ್ದಾರೆ.

ಅರಳು ಹುರಿದಂತೆ ಮಾತನಾಡುವ ಚೈತ್ರಾ ನಿರೂಪಕಿಯಷ್ಟೇ ಅಲ್ಲ. ಉದ್ಯಮಿ ಕೂಡ ಹೌದು. ಅವರದ್ದೇ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಇದೆ.

 ಈ ಹಿಂದೆ ಸತ್ಯ ನಾಯ್ಡು ಎಂಬುವರ ಜೊತೆ ಚೈತ್ರಾ ಮದುವೆಯಾಗಿತ್ತು. ಮನಸ್ತಾಪಗಳಿಂದ 2023ರಲ್ಲಿ ಅವರಿಬ್ಬರೂ ದೂರವಾಗಿದ್ದರು. ಜಗದೀಪ್ ಅವರ ಪ್ರೇಮ ನಿವೇದನೆಗೆ ಸಮ್ಮತಿಸಿ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಈ ಮದುವೆ ನಡೆದಿದೆ.

ಚೈತ್ರಾ ಅವರು ತಮ್ಮ ಮೆಹಂದಿ ಶಾಸ್ತ್ರದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಭಾವಿ ಪತಿಯ ಜೊತೆ ಸಖತ್ ಫೋಸ್ ಕೂಡ ನೀಡಿದ್ದಾರೆ. ಚೈತ್ರಾ ಅವರ ಈ ಮದರಂಗಿ ಶಾಸ್ತ್ರದಲ್ಲಿ ಇಡೀ ಕುಟುಂಬ ಭಾಗಿಯಾಗಿದೆ.  

ಬೆಂಗಳೂರಿನ ಅರಮನೆ ಮೈದಾನದಲ್ಲಿ ಚೈತ್ರಾ ವಾಸುದೇವನ್ ಮದುವೆ ಜರುಗಿದೆ. ಈ ಮದುವೆಗೆ ರಾಬರ್ಟ್‌ ನಿರ್ಮಾಪಕ ಉಮಾಪತಿ ಸೇರಿದಂತೆ ಅನೇಕರು ಭಾಗಿಯಾಗಿ ಈ ಜೋಡಿಗೆ ಶುಭಕೋರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments