Webdunia - Bharat's app for daily news and videos

Install App

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Sampriya
ಮಂಗಳವಾರ, 22 ಏಪ್ರಿಲ್ 2025 (16:40 IST)
Photo Courtesy X
ಮುಂಬೈ: ಬಾಲಿವುಡ್ ಖ್ಯಾತ ನಟ ಟೈಗರ್ ಶ್ರಾಫ್ ಅವರನ್ನು ಹತ್ಯೆ ಮಾಡಲು ಸುಫಾರಿ ನೀಡಲಾಗಿದೆ. ಅವರಿಗೆ ಕೊಲೆ ಬೆದರಿಕೆ ಇದೆ ಎಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಸುಳ್ಳು ಮಾಹಿತಿ ನೀಡಿದ ವ್ಯಕ್ತಿ ಈಗ ಪೊಲೀಸ್‌ ಅತಿಥಿಯಾಗಿದ್ದಾನೆ.

ಸೋಮವಾರ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಪಂಜಾಬ್‌ನಿಂದ ಕರೆ ಮಾಡಿದ್ದ ಮಾಣಿಕ್ ಕುಮಾರ್ ಸುಜಿಂದರ್ ಸಿಂಗ್ ಎಂಬ ವ್ಯಕ್ತಿ, ಟೈಗರ್ ಶ್ರಾಫ್ ಅವರ ಹತ್ಯೆಗೆ ಸುಪಾರಿ ನೀಡಲಾಗಿದ್ದು, ಕೆಲ ವ್ಯಕ್ತಿಗಳಿಗೆ ಆಯುಧ ಹಾಗೂ ₹2 ಲಕ್ಷ ನೀಡಲಾಗಿದೆ ಎಂದು ಹೇಳಿಕೊಂಡಿದ್ದ.

ಕೆಲವು ಭದ್ರತಾ ಏಜೆನ್ಸಿಯವರಿಂದ ಟೈಗರ್ ಶ್ರಾಫ್ ಅವರನ್ನು ಕೊಲ್ಲಲು ಸಿದ್ಧತೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಸಿಂಗ್ ನೀಡಿದ್ದ ಮಾಹಿತಿ ಸುಳ್ಳು ಎಂದು ಗೊತ್ತಾಗಿದೆ.

ಈ ಸಂಬಂಧ ಮುಂಬೈ ಪೊಲೀಸರು ಖಾರ್ ಉಪನಗರದಲ್ಲಿ ಪ್ರಕರಣ ದಾಖಲಿಸಿದ್ದು, ಪಂಜಾಬ್‌ನ ಅಧಿಕಾರಿಗಳ ಸಹಕಾರದಿಂದ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಮುಂಬೈಗೆ ತರಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments