Webdunia - Bharat's app for daily news and videos

Install App

ಮಗನ ಆರೋಗ್ಯದ ಅಪ್‌ಡೇಟ್‌ ನೀಡಿ ಸಿಂಗಾಪುರಕ್ಕೆ ದೌಡಾಯಿಸಿದ ಆಂಧ್ರ ಡಿಸಿಎಂ ಪವನ್‌ಕಲ್ಯಾಣ್‌

Sampriya
ಬುಧವಾರ, 9 ಏಪ್ರಿಲ್ 2025 (14:41 IST)
ಹೈದರಾಬಾದ್‌:  ಸಿಂಗಾಪುರದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿರುವ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಟಾಲಿವುಡ್‌ ಸೂಪರ್‌ ಸ್ಟಾರ್‌ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್‌ ಚೇತರಿಸಿಕೊಳ್ಳುತ್ತಿದ್ದಾನೆ.

ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್‌ಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಗಾಪುರಕ್ಕೆ ತೆರಳುವ ಮುನ್ನ ಪುತ್ರನ ಆರೋಗ್ಯದ ಅಪ್‌ಡೇಟ್‌ ಅನ್ನು ಪವನ್ ಕಲ್ಯಾಣ್ ಮಾಧ್ಯಮಕ್ಕೆ ನೀಡಿದರು. ಸಹೋದರ ಮೆಗಾಸ್ಟಾರ್ ಚಿರಂಜೀವಿ ದಂಪತಿ ಜೊತೆ ಪವನ್ ಕಲ್ಯಾಣ್ ಸಿಂಗಾಪುರಕ್ಕೆ ತೆರಳಿದ್ದಾರೆ.  

ಮಾರ್ಕ್ ಶಂಕರ್  ಶಾಲೆಯ ಸಮ್ಮರ್ ಕ್ಯಾಂಪ್‌ಗೆ ಭಾಗಿಯಾಗಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಪುತ್ರನೊಂದಿಗೆ ಇತರೆ ವಿದ್ಯಾರ್ಥಿಗಳು ಸಹ ಇದ್ದರು. ಮಗನ ಕೈ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ. ಮಾರ್ಕ್ ಶಂಕರ್‌ಗೆ ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ ಎಂದು ಪ್ರತಿಕ್ರಿಯಿಸಿದರು.

ಮಾರ್ಕ್ ಶಂಕರ್ನ ಶ್ವಾಸಕೋಶಕ್ಕೆ ಹಾನಿಯಾಗಿದ್ದು, ಬ್ರಾಂಕೋಸ್ಕೋಪಿ ಮಾಡಲಾಗಿದೆ. ಅವನ ದೇಹಕ್ಕೆ ಸಾಕಷ್ಟು ಹೊಗೆ ಸೇರಿದೆ. ಹಾಗಾಗಿ ಮಗನಿಗೆ ಚಿಕಿತ್ಸೆ ಮುಂದುವರೆದಿದೆ. ಈ ಬೆಂಕಿ ಅವಘಡದಲ್ಲಿ ನನ್ನ ಮಗನ ಮುಂದೆ ಕುಳಿತಿದ್ದ ಹುಡುಗನಿಗೆ ತೀವ್ರ ಗಾಯಗಳಾಗಿವೆ. ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ಪವನ್ ಕಲ್ಯಾಣ್ ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments