Webdunia - Bharat's app for daily news and videos

Install App

ಬೆಂಗಳೂರಿನ ಕಸ ವಿಲೇವಾರಿ ಬಗ್ಗೆ ಮನವಿ ಮಾಡಿದ ನಟ ಅನಿರುದ್ಧ್

Webdunia
ಶನಿವಾರ, 7 ನವೆಂಬರ್ 2020 (10:01 IST)
ಬೆಂಗಳೂರು: ರಾಜಧಾನಿಯಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಕುವುದು ಮತ್ತು ಅದನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಉದ್ಯಾನ ನಗರಿಯನ್ನು ಕಸದ ಗೂಡಾಗಿ ಮಾಡುತ್ತಿರುವುದರ ವಿರುದ್ಧ ನಟ ಅನಿರುದ್ಧ್ ಧ‍್ವನಿಯೆತ್ತಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ರಾಜಧಾನಿಯ ಕೆಲವೆಡೆ ಕಸ ಬಿಸಾಕಿರುವ ಫೋಟೋ ಪ್ರಕಟಿಸಿರುವ ಅನಿರುದ್ಧ್ ‘ಇದು ನಾಡಿನ ರಾಜಧಾನಿಯಾದ ಬೆಂಗಳೂರಿನ ಛಾಯಾಚಿತ್ರಗಳು. ರಸ್ತೆ ತುಂಬಾ ಕಸ, ಬೇಕಾದಷ್ಟು ಕಸದ ತೊಟ್ಟಿಗಳು ಇಲ್ಲದೇ ಇರೋದು, ಅಸ್ವಚ್ಛ, ಗುಂಡಿಗಳಿರೋ ರಸ್ತೆಗಳು, ಅವೈಜ್ಞಾನಿಕ ದಿಣ್ಣೆಗಳು, ಬೇಕಾದಷ್ಟು ಗಿಡಗಳು ನೆಡದೇ ಇರೋದು, ವಿದ್ಯುತ್ ಮತ್ತಿತರ ತಂತಿಗಳು ಜೋತು ಬಿದ್ದಿರೋದು.. ಪಟ್ಟಿ ಬೆಳೆಯುತ್ತಾ ಸಾಗುತ್ತದೆ. ನಾಯಕರೇ, ನಾಗರಿಕರೇ, ಚುನಾವಣೆ ಮುಗಿದ ಮೇಲೆ ನಮ್ಮ ಜವಾಬ್ಧಾರಿ ಮುಗಿಯಲ್ಲ. ಪ್ರಾರಂಭ ಆಗುತ್ತೆ. ದಯವಿಟ್ಟು ಕ್ರಮ ತೆಗೆದುಕೊಳ್ಳಿ.ಇದು ತಮ್ಮಲ್ಲಿ ಮನಃಪೂರ್ವಕವಾಗಿ ಮನವಿ, ನಿಮ್ಮ ಕೈಲಾದಷ್ಟು ಪ್ರಯತ್ನ ಪಡಿ. ನಮ್ಮ ಊರು, ಬಡಾವಣೆ, ಸ್ವಚ್ಛ ಸುಂದರ ಮಾಡೋಣ’ ಎಂದು ಮನವಿ ಮಾಡಿದ್ದಾರೆ.

ತಮ್ಮ ಧಾರವಾಹಿ ಮೂಲಕ ಸ್ವಚ್ಛತೆ, ಸಾಮಾಜಿಕ ಕಳಕಳಿಯ ಸಂದೇಶ ನೀಡುತ್ತಿರುವ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಈಗ ನಿಜ ಜೀವನದಲ್ಲೂ ಸಾಮಾಜಿಕ ಕಳಕಳಿಯ ಬಗ್ಗೆ ಧ್ವನಿಯೆತ್ತಿರುವುದಕ್ಕೆ ಅಭಿಮಾನಿಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments