ದೊಡ್ಡ ಗಂಡಾಂತರದಿಂದ ಪಾರಾದ ಪುನೀತ್ ರಾಜ್ ಕುಮಾರ್

Webdunia
ಶನಿವಾರ, 30 ಡಿಸೆಂಬರ್ 2017 (08:46 IST)
ಬೆಂಗಳೂರು: ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದ ಸಿನಿಮಾ ಬಿಡುಗಡೆಯಾದ ಒಂದೇ ವಾರಕ್ಕೆ ನಿಂತು ಹೋದರೆ ಸಿನಿಮಾ ತಂಡದವರ ಗತಿ ಏನಾಗಬೇಡ? ಅಂಜನಿ ಪುತ್ರ ತಂಡಕ್ಕೂ ಹಾಗೇ ಆಗಿತ್ತು. ಆದರೆ ಇದೀಗ ಸಮಾಧಾನದ ನಿಟ್ಟುಸಿರು ಬಿಟ್ಟಿದೆ.
 

ಪುನೀತ್ ರಾಜ್ ಕುಮಾರ್ ಅಭಿನಯದ ಅಂಜನಿ ಪುತ್ರ ಬಿಡುಗಡೆಯಾದ ಕೆಲವೇ ದಿನಕ್ಕೆ ವಕೀಲರ ವಿರುದ್ಧ ಆಕ್ಷೇಪಾರ್ಹ ಸಂಭಾಷಣೆಯಿದೆ ಎಂಬ ಕಾರಣಕ್ಕೆ ವಕೀಲರ ಸಂಘ ಕೋರ್ಟ್ ನಿಂದ ತಡೆಯಾಜ್ಞೆ ತಂದಿತ್ತು.

ಇದರಿಂದಾಗಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದ ಸಿನಿಮಾಗೆ ದೊಡ್ಡ ಹೊಡೆತ ಬೀಳುವುದರಲ್ಲಿತ್ತು. ಆದರೆ ಇದೀಗ ನಿರ್ದೇಶಕ ಹರ್ಷ ವಕೀಲರ ಕ್ಷಮೆ ಕೇಳಿದ್ದು, ಚಿತ್ರದ ಅಗತ್ಯಕ್ಕೆ ತಕ್ಕುದಾಗಿ ಆ ಸಂಭಾಷಣೆ ಸೇರಿಸಲಾಗಿದೆ. ವಕೀಲರನ್ನು ನೋಯಿಸುವ ಉದ್ದೇಶವಿರಲಿಲ್ಲ ಎಂದಿದ್ದಾರೆ.

ಅಷ್ಟೇ ಅಲ್ಲದೆ, ನ್ಯಾಯಾಲಯದಲ್ಲಿ ಚಿತ್ರ ತಂಡ ನಷ್ಟ ಅನುಭವಿಸುತ್ತಿರುವ ಕಾರಣದಿಂದ ತಡೆಯಾಜ್ಞೆ ತೆರವುಗೊಳಿಸುವಂತೆ ಅಫಿಡವಿಟ್ ಸಲ್ಲಿಸಲಾಗಿತ್ತು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯ ಜತೆಗೆ 25 ಸಾವಿರ ರೂ. ದಂಡ ವಿಧಿಸಿ ಚಿತ್ರದ ಮೇಲಿದ್ದ ತಡೆಯಾಜ್ಞೆ ತೆರವುಗೊಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments