ದೊಡ್ಮನೆಯಿಂದ ಅನ್ನಸಂತರ್ಪಣೆ

Webdunia
ಮಂಗಳವಾರ, 9 ನವೆಂಬರ್ 2021 (07:57 IST)
ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ಅಕ್ಟೋಬರ್ 9) 12 ದಿನಗಳಾಗಿವೆ.
ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅನ್ನಸಂತರ್ಪಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಾದರೆ ಈ ಕಾರ್ಯಕ್ರಮ ಹೇಗೆ ನಡೆಯಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ.  ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿದೆ. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಬಹುದು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. 2 ಸಾವಿರಕ್ಕೂ ಹೆಚ್ಚು ಚೇರ್, ಊಟದ ಟೇಬಲ್ ಹಾಕಲಾಗಿದೆ. 600ಕ್ಕೂ ಹೆಚ್ಚು ಅಡುಗೆ ಭಟ್ಟರು, ಹೆಲ್ಪರ್ಗಳು ಭಾಗಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿಂದ ಅನ್ನಸಂತರ್ಪಣೆ ಪ್ರಾರಂಭವಾಗಲಿದೆ.
20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗುತ್ತಿದೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಊಟದ ಸಂದರ್ಭದಲ್ಲಿ ನೂಕುನುಗ್ಗಲು ಆಗದಿರಲಿ ಎನ್ನುವ ಕಾರಣಕ್ಕೆ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಕಸಪುರದೊಳ್‌ ಬಿಡುಗಡೆ ದಿನಾಂಕ ಔಟ್‌, ಹೊಸ ಅವತಾರದಲ್ಲಿ ರಾಜ್ ಬಿ ಶೆಟ್ಟಿ

ರಾಮ್‌ಚರಣ್ ನೋಡಲು ಆಸ್ಪತ್ರೆಗೆ ನುಗ್ಗಿದ ಫ್ಯಾನ್ಸ್‌, ಮಗಳನ್ನು ಹಿಡಿದುಕೊಂಡು ನಟ ಪರದಾಟ, Video

ಫಿಲ್ಮ್ ಚೇಂಬರ್ ಅಧ್ಯಕ್ಷೆಯಾಗಿ ಆಯ್ಕೆಯಾದ ನಟಿ ಜಯಮಾಲಾ

ಗಿಲ್ಲಿ ವಿರುದ್ಧ ಹೊಸ ಖ್ಯಾತೆ ತೆಗೆದ ಟ್ಯಾಟೂ ಅಭಿಮಾನಿ, ಏನ್ ವಿಷಯ ಗೊತ್ತಾ

ಅವಳಿ ಮಕ್ಕಳನ್ನು ಸ್ವಾಗತಿಸಿದ ರಾಮ್‌ಚರಣ್‌, ಉಪಾಸನಾ

ಮುಂದಿನ ಸುದ್ದಿ
Show comments