Select Your Language

Notifications

webdunia
webdunia
webdunia
webdunia

ದರ್ಶನ್ ತಪ್ಪು ಮಾಡಿರಲ್ಲ ಎನ್ನುವವರಿಗೆ ಮತ್ತೊಂದು ಶಾಕ್: ಪೊಲೀಸರಿಗೆ ಸಿಕ್ಕ ಮತ್ತೊಂದು ಸಾಕ್ಷ್ಯ ಏನು

Darshan Thoogudeepa

Krishnaveni K

ಬೆಂಗಳೂರು , ಬುಧವಾರ, 7 ಆಗಸ್ಟ್ 2024 (16:03 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ತಪ್ಪು ಮಾಡಿರಲ್ಲ ಎಂಬ ನಂಬಿಕೆಯಿದೆ ಎನ್ನುವವರಿಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ. ದರ್ಶನ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಿದೆ.

ನಟ ದರ್ಶನ್ ತೂಗುದೀಪ ಅರೆಸ್ಟ್ ಆದಾಗಿನಿಂದ ಹಲವು ಸಿನಿಮಾ ತಾರೆಯರು ಅವರ ಪರವಾಗಿ ಬ್ಯಾಟ್ ಮಾಡಿದ್ದರು. ದರ್ಶನ್ ಒಳ್ಳೆಯ ವ್ಯಕ್ತಿ. ಅವರು ತಪ್ಪು ಮಾಡಿರಲ್ಲ ಎಂದೇ ಹೇಳುತ್ತಿದ್ದಾರೆ. ಆದರೆ ಇದುವರೆಗೂ ಸಿಕ್ಕಿರುವ ಸಾಕ್ಷ್ಯಗಳೆಲ್ಲವೂ ದರ್ಶನ್ ವಿರುದ್ಧವೇ ಇದೆ. ಎಲ್ಲವೂ ದರ್ಶನ್ ತಪ್ಪು ಮಾಡಿದ್ದಾರೆ ಎಂದೇ ಹೇಳುತ್ತಿದೆ.

ಇದೀಗ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಿದೆ. ದರ್ಶನ್ ಘಟನೆ ನಡೆದ ದಿನ ಹಾಕಿದ್ದ ಶರ್ಟ್ ನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಶರ್ಟ್ ನಲ್ಲಿ ರಕ್ತದ ಕಲೆ ಇರುವುದು ಪತ್ತೆಯಾಗಿದ್ದು, ಈ ರಕ್ತದ ಕಲೆ ರೇಣುಕಾಸ್ವಾಮಿಯ ರಕ್ತದ ಕಲೆಗೆ ಮ್ಯಾಚ್ ಆಗಿದೆ.

ಹೀಗಾಗಿ ಈ ಪ್ರಕರಣದಲ್ಲಿ ದರ್ಶನ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಂತಾಗಿದೆ. ಘಟನೆ ನಡೆದ ದಿನ ಆರೋಪಿಗಳು ಧರಿಸಿದ್ದ ಶೂ, ಚಪ್ಪಲಿ ಸೇರಿದಂತೆ ಅನೇಕ ವಸ್ತುಗಳನ್ನು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಿದ್ದರು. ಅವೆಲ್ಲದರ ವರದಿ ಇನ್ನಷ್ಟೇ ಬರಬೇಕಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ವಯನಾಡು ದುರಂತಕ್ಕೆ ಮರುಗಿದ ನಟ ಪ್ರಭಾಸ್ 2 ಕೋಟಿ ಪರಿಹಾರ