Webdunia - Bharat's app for daily news and videos

Install App

ದರ್ಶನ್ ತಪ್ಪು ಮಾಡಿರಲ್ಲ ಎನ್ನುವವರಿಗೆ ಮತ್ತೊಂದು ಶಾಕ್: ಪೊಲೀಸರಿಗೆ ಸಿಕ್ಕ ಮತ್ತೊಂದು ಸಾಕ್ಷ್ಯ ಏನು

Krishnaveni K
ಬುಧವಾರ, 7 ಆಗಸ್ಟ್ 2024 (16:03 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ತಪ್ಪು ಮಾಡಿರಲ್ಲ ಎಂಬ ನಂಬಿಕೆಯಿದೆ ಎನ್ನುವವರಿಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ. ದರ್ಶನ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಿದೆ.

ನಟ ದರ್ಶನ್ ತೂಗುದೀಪ ಅರೆಸ್ಟ್ ಆದಾಗಿನಿಂದ ಹಲವು ಸಿನಿಮಾ ತಾರೆಯರು ಅವರ ಪರವಾಗಿ ಬ್ಯಾಟ್ ಮಾಡಿದ್ದರು. ದರ್ಶನ್ ಒಳ್ಳೆಯ ವ್ಯಕ್ತಿ. ಅವರು ತಪ್ಪು ಮಾಡಿರಲ್ಲ ಎಂದೇ ಹೇಳುತ್ತಿದ್ದಾರೆ. ಆದರೆ ಇದುವರೆಗೂ ಸಿಕ್ಕಿರುವ ಸಾಕ್ಷ್ಯಗಳೆಲ್ಲವೂ ದರ್ಶನ್ ವಿರುದ್ಧವೇ ಇದೆ. ಎಲ್ಲವೂ ದರ್ಶನ್ ತಪ್ಪು ಮಾಡಿದ್ದಾರೆ ಎಂದೇ ಹೇಳುತ್ತಿದೆ.

ಇದೀಗ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಿದೆ. ದರ್ಶನ್ ಘಟನೆ ನಡೆದ ದಿನ ಹಾಕಿದ್ದ ಶರ್ಟ್ ನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಶರ್ಟ್ ನಲ್ಲಿ ರಕ್ತದ ಕಲೆ ಇರುವುದು ಪತ್ತೆಯಾಗಿದ್ದು, ಈ ರಕ್ತದ ಕಲೆ ರೇಣುಕಾಸ್ವಾಮಿಯ ರಕ್ತದ ಕಲೆಗೆ ಮ್ಯಾಚ್ ಆಗಿದೆ.

ಹೀಗಾಗಿ ಈ ಪ್ರಕರಣದಲ್ಲಿ ದರ್ಶನ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಂತಾಗಿದೆ. ಘಟನೆ ನಡೆದ ದಿನ ಆರೋಪಿಗಳು ಧರಿಸಿದ್ದ ಶೂ, ಚಪ್ಪಲಿ ಸೇರಿದಂತೆ ಅನೇಕ ವಸ್ತುಗಳನ್ನು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಿದ್ದರು. ಅವೆಲ್ಲದರ ವರದಿ ಇನ್ನಷ್ಟೇ ಬರಬೇಕಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments