Webdunia - Bharat's app for daily news and videos

Install App

ದರ್ಶನ್ ತಪ್ಪು ಮಾಡಿರಲ್ಲ ಎನ್ನುವವರಿಗೆ ಮತ್ತೊಂದು ಶಾಕ್: ಪೊಲೀಸರಿಗೆ ಸಿಕ್ಕ ಮತ್ತೊಂದು ಸಾಕ್ಷ್ಯ ಏನು

Krishnaveni K
ಬುಧವಾರ, 7 ಆಗಸ್ಟ್ 2024 (16:03 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ತಪ್ಪು ಮಾಡಿರಲ್ಲ ಎಂಬ ನಂಬಿಕೆಯಿದೆ ಎನ್ನುವವರಿಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ. ದರ್ಶನ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಿದೆ.

ನಟ ದರ್ಶನ್ ತೂಗುದೀಪ ಅರೆಸ್ಟ್ ಆದಾಗಿನಿಂದ ಹಲವು ಸಿನಿಮಾ ತಾರೆಯರು ಅವರ ಪರವಾಗಿ ಬ್ಯಾಟ್ ಮಾಡಿದ್ದರು. ದರ್ಶನ್ ಒಳ್ಳೆಯ ವ್ಯಕ್ತಿ. ಅವರು ತಪ್ಪು ಮಾಡಿರಲ್ಲ ಎಂದೇ ಹೇಳುತ್ತಿದ್ದಾರೆ. ಆದರೆ ಇದುವರೆಗೂ ಸಿಕ್ಕಿರುವ ಸಾಕ್ಷ್ಯಗಳೆಲ್ಲವೂ ದರ್ಶನ್ ವಿರುದ್ಧವೇ ಇದೆ. ಎಲ್ಲವೂ ದರ್ಶನ್ ತಪ್ಪು ಮಾಡಿದ್ದಾರೆ ಎಂದೇ ಹೇಳುತ್ತಿದೆ.

ಇದೀಗ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಿದೆ. ದರ್ಶನ್ ಘಟನೆ ನಡೆದ ದಿನ ಹಾಕಿದ್ದ ಶರ್ಟ್ ನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಶರ್ಟ್ ನಲ್ಲಿ ರಕ್ತದ ಕಲೆ ಇರುವುದು ಪತ್ತೆಯಾಗಿದ್ದು, ಈ ರಕ್ತದ ಕಲೆ ರೇಣುಕಾಸ್ವಾಮಿಯ ರಕ್ತದ ಕಲೆಗೆ ಮ್ಯಾಚ್ ಆಗಿದೆ.

ಹೀಗಾಗಿ ಈ ಪ್ರಕರಣದಲ್ಲಿ ದರ್ಶನ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಂತಾಗಿದೆ. ಘಟನೆ ನಡೆದ ದಿನ ಆರೋಪಿಗಳು ಧರಿಸಿದ್ದ ಶೂ, ಚಪ್ಪಲಿ ಸೇರಿದಂತೆ ಅನೇಕ ವಸ್ತುಗಳನ್ನು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಿದ್ದರು. ಅವೆಲ್ಲದರ ವರದಿ ಇನ್ನಷ್ಟೇ ಬರಬೇಕಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಮುಂದಿನ ಸುದ್ದಿ
Show comments