Webdunia - Bharat's app for daily news and videos

Install App

ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಕಾರಿನಲ್ಲಿ ಇದ್ದದ್ದು ನಾಲ್ಕಲ್ಲ, ಆರು ಜನ!

Webdunia
ಬುಧವಾರ, 26 ಸೆಪ್ಟಂಬರ್ 2018 (14:34 IST)
ಬೆಂಗಳೂರು : ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್. ಅಪಘಾತಕ್ಕೀಡಾದ ಕಾರಿನಲ್ಲಿ ಇದ್ದದ್ದು ನಾಲ್ಕಲ್ಲ, ಆರು ಜನ ಎಂಬ ಮಾಹಿತಿಯನ್ನು  ಇದೀಗ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣ್ಣೇಶ್ವರ್ ನೀಡಿದ್ದಾರೆ.


ನಟ ದರ್ಶನ್ ಅವರ ಕಾರು ಅಪಘಾತಕ್ಕೀಡಾದ ಸಂದರ್ಭದಲ್ಲಿ ಅದರಲ್ಲಿ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು ಎಂದು ದರ್ಶನ್ ಆಪ್ತರು ಹೇಳಿದ್ದಾರೆ. ಆದರೆ ಆಸ್ಪತ್ರೆಯ ಎಂಎಲ್ ಸಿ ವರದಿಯ ಪ್ರಕಾರ ಆರು ಜನಕ್ಕೆ ಚಿಕಿತ್ಸೆ ನೀಡಲಾಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರಿಗೆ ಸಹಜ ತಪಾಸಣೆ ನೀಡಲಾಗಿದೆ. ನಂತರ ಅವರು ಆಸ್ಪತ್ರೆಯಿಂದ ನಿರ್ನಮಿಸಿದ್ದಾರೆ ಎಂದು ತಿಳಿಸಿದೆ.


ಆದರೆ ಎಫ್ ಐ ಆರ್ ನಲ್ಲಿಯೂ ಕೂಡ ಕಾರಿನಲ್ಲಿ 4 ಜನ ಇದ್ದರು ಎಂದು ಉಲ್ಲೇಖಿಸಲಾಗಿದೆ. ಹಾಗಾದ್ರೆ ಪೊಲೀಸರಿಗೆ ಕಾರಿನಲ್ಲಿ ನಾಲ್ವರು ಇದ್ದದ್ದಾಗಿ ಸುಳ್ಳು  ಮಾಹಿತಿ ಕೊಟ್ಟಿದ್ದೇಕೆ? ಕಾರಿನಲ್ಲಿ ಮತ್ತಿಬ್ಬರು ಇದ್ದದ್ದನ್ನು ದರ್ಶನ್ ಆಪ್ತರು ಮುಚ್ಚಿಟ್ಟಿದ್ದೇಕೆ? ಅವರಿಬ್ಬರು ಯಾರು? ಎಂಬ ಅನೇಕ  ಅನುಮಾನಗಳು ಈ ಪ್ರಕರಣದಲ್ಲಿ ಮೂಡಿಬಂದಿದೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments