ಬೆಂಗಾವಲು ಪಡೆಗೆ ಢಿಕ್ಕಿ ಹೊಡೆದಿದ್ದ ಯಶ್ ಅಭಿಮಾನಿ ಸಾವು

Krishnaveni K
ಮಂಗಳವಾರ, 9 ಜನವರಿ 2024 (09:59 IST)
Photo Courtesy: Twitter
ಬೆಂಗಳೂರು: ಯಾಕೋ ಈ ಬಾರಿ ರಾಕಿಂಗ್ ಸ್ಟಾರ್ ಯಶ್ ಗೆ ಬರ್ತ್ ಡೇ ಹ್ಯಾಪಿಯಾಗಿರಲಿಲ್ಲ. ಅವರ ಹುಟ್ಟುಹಬ್ಬ ದಿನವೇ ನಾಲ್ವರು ಜೀವ ಕಳೆದುಕೊಳ್ಳುವಂತಾಗಿದೆ.

ನಿನ್ನೆಯಷ್ಟೇ ಅವರ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದರು. ಇವರ ಸಾವಿನ ಸುದ್ದಿಯಿಂದ ಬೇಸರಗೊಂಡ ಯಶ್ ವಿದೇಶದಿಂದ ಗದಗ ಜಿಲ್ಲೆಗೆ ಆಗಮಿಸಿ ಮೃತ ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಿದ್ದರು.

ಆದರೆ ಯಶ್ ಬರುತ್ತಿದ್ದ ಸುದ್ದಿ ತಿಳಿದು ಸಾವಿರಾರು ಜನರು ಗ್ರಾಮಕ್ಕೆಹರಿದುಬಂದಿದ್ದರು. ಅಭಿಮಾನಿ ಕುಟುಂಬಸ್ಥರನ್ನು ಭೇಟಿ ಮಾಡಲು ಬಂದಾಗ ಮತ್ತೊಂದು ದುರಂತವಾಗಿದೆ.

ಯಶ್ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರ ಬೆಂಗಾವಲು ವಾಹನಕ್ಕೆ ದ್ವಿ ಚಕ್ರವಾಹನದಲ್ಲಿ ತೆರಳುತ್ತಿದ್ದ ಅಭಿಮಾನಿ ನಿಖಿಲ್ ಢಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

ಮುಂದಿನ ಸುದ್ದಿ
Show comments