Webdunia - Bharat's app for daily news and videos

Install App

ಆಂಕರ್ ಅನುಶ್ರೀ ಬರೆದ ಈ ಸಾಲುಗಳು ವೈರಲ್ ಆಯ್ತು!

Webdunia
ಮಂಗಳವಾರ, 16 ಜೂನ್ 2020 (09:31 IST)
ಬೆಂಗಳೂರು: ಆಂಕರಿಂಗ್ ಗೆ ಮತ್ತೊಂದು ಹೆಸರೇ ಅನುಶ್ರೀ ಎನ್ನುವಷ್ಟು ಅಭಿಮಾನಿಗಳನ್ನು ಬೆಳೆಸಿಕೊಂಡಿದ್ದಾರೆ ಈ ಕನ್ನಡತಿ. ಯಾವುದೇ ವಿಚಾರವಿರಲಿ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸುವ ಅನುಶ್ರೀ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬರೆದ ಸಾಲೊಂದು ಈಗ ನೆಟ್ಟಿಗರ ಗಮನ ಸೆಳೆಯುತ್ತಿದೆ.


ಸುಶಾಂತ್ ಸಾವಿನ ಬಳಿಕ ಇನ್ ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಕನ್ನಡದಲ್ಲಿ ಅನುಶ್ರೀ ಬರೆದ ಸಾಲುಗಳು ಈಗ ನೆಟ್ಟಿಗರ ಗಮನ ಸೆಳೆದಿದೆ. ಯಾವ ನಗುವಿನ ಹಿಂದೆ ಯಾವ ನೋವಿರುತ್ತದೋ ಯಾರು ಬಲ್ಲರು? ಎಂದು ಅವರು ಬರೆದುಕೊಂಡ ಸಾಲುಗಳು ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಒಂಟಿತನ ಎನ್ನುವುದು ಕೊರೋನಾ ವೈರಸ್ ಗಿಂತ ಅಪಾಯಕಾರಿ. ಯಾರೂ ಯಾರ ಬಗ್ಗೆಯೂ ಕೆಟ್ಟದಾಗಿ ಹೀಯಾಳಿಸುವ ಮೊದಲು, ಕಾಮೆಂಟ್ ಮಾಡುವ ಮೊದಲು ಯೋಚಿಸಿ. ಅಂತಹ ಕೆಲವು ಮಾತುಗಳು ಕೆಲವರನ್ನು ಇಲ್ಲವಾಗಿಸಿಬಿಡುತ್ತದೆ. ಎಲ್ಲಾ ಮನಸ್ತಾಪಗಳನ್ನು ದೂರ ಇಡಿ. ಸ್ನೇಹಿತರಿಗೋ, ಮನೆಯವರಿಗೋ ಕರೆ ಮಾಡಬೇಕೆಂದಿದ್ದರೆ ಈವತ್ತೇ ಕರೆ ಮಾಡಿ. ಇನ್ನೊಬ್ಬರ ಮಾತಿಗೆ ಕಿವಿಯಾಗಿ. ಯಾಕಂದ್ರೆ ನಾಳೆ ಅವರಿಲ್ಲವಾಗಬಹುದು’ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments