Webdunia - Bharat's app for daily news and videos

Install App

ಮಾರ್ಟಿನ್ ಚಿತ್ರತಂಡದಲ್ಲಿ ಬಿರುಕು ವದಂತಿಗೆ ನಿರ್ದೇಶಕ ಎಪಿ ಅರ್ಜುನ್ ಸ್ಪಷ್ಟನೆ

Krishnaveni K
ಶುಕ್ರವಾರ, 19 ಏಪ್ರಿಲ್ 2024 (10:42 IST)
Photo Courtesy: Twitter
ಬೆಂಗಳೂರು: ಧ‍್ರುವ ಸರ್ಜಾ ನಾಯಕರಾಗಿರುವ ಮಾರ್ಟಿನ್ ಸಿನಿಮಾ ತಂಡದಲ್ಲಿ ನಿರ್ದೇಶಕ ಮತ್ತು ನಿರ್ಮಾಪಕರ ನಡುವೆ ವೈಮನಸ್ಯ ಮೂಡಿದೆ. ಇಬ್ಬರೂ ಫಿಲಂ ಚೇಂಬರ್ ಗೆ ದೂರು ಕೊಟ್ಟಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆ ಈಗ ನಿರ್ದೇಶಕ ಎಪಿ ಅರ್ಜುನ್ ಸ್ಪಷ್ಟನೆ ನೀಡಿದ್ದಾರೆ.

ನಿರ್ಮಾಪಕ ಉದಯ್ ಕೆ ಮಹ್ತಾ ಜೊತೆ ಲೈವ್ ಬಂದ ನಿರ್ದೇಶಕ ಎಪಿ ಅರ್ಜುನ್ ನಮ್ಮ ನಡುವೆ ಯಾವುದೇ ವೈಮನಸ್ಯಗಳಿಲ್ಲ. ಯಾರೋ  ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದಕ್ಕೆಲ್ಲಾ ಕಿವೊಗಡಬೇಡಿ. ನಾವು ಫಿಲಂ ಚೇಂಬರ್ ಗೆ ದೂರು ನೀಡಿದ್ದು ನಿಜ. ಆದರೆ ಅದು ಈ ಕಾರಣಕ್ಕೆ ಅಲ್ಲ. ಸಿಜಿ ಕೆಲಸದಲ್ಲಿ ಸಮಸ್ಯೆಯಾಗಿದ್ದರಿಂದ ಫಿಲಂ ಚೇಂಬರ್ ಗೆ ದೂರು ನೀಡಿದ್ದೆವು. ತಪ್ಪು ಮಾಹಿತಿ ಸ್ಪ್ರೆಡ್ ಮಾಡಬೇಡಿ. ನಮ್ಮ ಮಧ್ಯೆ ಕಿತ್ತಾಟವಿಲ್ಲ’ ಎಂದಿದ್ದಾರೆ.

ಇನ್ನು ನಿರ್ಮಾಪಕ ಉದಯ್ ಕೆ ಮೆಹ್ತಾ ಕೂಡಾ ಮಾತನಾಡಿದ್ದು, ದಯವಿಟ್ಟು ಯಾರೂ ತಪ್ಪು ಮಾಹಿತಿ ಹರಬೇಡಿ. ಈಗಷ್ಟೇ ಡಬ್ಬಿಂಗ್ ಮಾಡಿ ಬಂದಿದ್ದೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದಿದ್ದಾರೆ.

ಮಾರ್ಟಿನ್ ಸಿನಿಮಾ ಶುರುವಾಗಿ ಎರಡು ವರ್ಷವೇ ಕಳೆದಿದೆ. ಇನ್ನೂ ಚಿತ್ರತಂಡ ಬಿಡುಗಡೆ ಬಗ್ಗೆ ಮಾತನಾಡುತ್ತಿಲ್ಲ. ಒಂದು ಸಣ್ಣ ತುಣುಕು ಬಿಟ್ಟಿದ್ದು ಬಿಟ್ಟರೆ ಮಾರ್ಟಿನ್ ಕಡೆಯಿಂದ ಯಾವುದೇ ಸುದ್ದಿಯಿಲ್ಲ. ಹೀಗಾಗಿ ಸಹಜವಾಗಿಯೇ ಚಿತ್ರದ ಬಗ್ಗೆ ಒಂದಿಲ್ಲೊಂದು ರೂಮರ್ ಗಳು ಕೇಳಿಬರುತ್ತಲೇ ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments