Webdunia - Bharat's app for daily news and videos

Install App

ಮಾರ್ಟಿನ್ ಸಿನಿಮಾ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ ಎಪಿ ಅರ್ಜುನ್

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (13:33 IST)
ಬೆಂಗಳೂರು: ಸ್ಯಾಂಡಲ್ ವುಡ್ ಈಗ ಮತ್ತೊಮ್ಮೆ ಬೇಡದ ಕಾರಣಕ್ಕೆ ಸುದ್ದಿಯಾಗುತ್ತಿದೆ. ಧ್ರುವ ಸರ್ಜಾ ನಾಯಕರಾಗಿರುವ ಮಾರ್ಟಿನ್ ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿಯಿರುವಾಗಗ ನಿರ್ದೇಶಕ ಎಪಿ ಅರ್ಜುನ್ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಾರ್ಟಿನ್ ಸಿನಿಮಾವನ್ನು ಎಪಿ ಅರ್ಜುನ್ ಅವರೇ ನಿರ್ದೇಶಿಸಿದ್ದರು. ಪೋಸ್ಟರ್ ಗಳಲ್ಲಿಯೂ ನಿರ್ದೇಶಕ ಎಂದು ಅವರ ಹೆಸರೇ ಇದೆ. ಆದರೆ ಇತ್ತೀಚೆಗೆ ನಿರ್ಮಾಪಕ ಉದಯ್ ಮೆಹ್ತಾ ಮತ್ತು ನಿರ್ದೇಶಕ ಎಪಿ ಅರ್ಜುನ್ ನಡುವೆ ಹಣಕಾಸಿನ ವಿಚಾರಕ್ಕೆ ಮನಸ್ತಾಪವಾಗಿದೆ. ಆದರೆ ಉದಯ್ ಕೆ ಮೆಹ್ತಾ ನಿರ್ದೇಶಕರನ್ನು ದೂರವಿಟ್ಟು ಸಿನಿಮಾ ಪ್ರಚಾರ ಕೆಲಸದಲ್ಲಿ ತೊಡಗಿಸಿಕೊಂಡು ಬಿಡುಗಡೆಗೆ ಸಜ್ಜಾಗಿದ್ದರು.

ಇದು ನಿರ್ದೇಶಕ ಎಪಿ ಅರ್ಜುನ್ ಕೆಂಗಣ್ಣಿಗೆ ಗುರಿಯಾಗಿದೆ. ನನ್ನನ್ನು ಗಣನೆಗೆ ತೆಗೆದುಕೊಳ್ಳದೇ ಸಿನಿಮಾ ಬಿಡುಗಡೆ ಮಾಡಲು ಬಿಡಲ್ಲ ಎಂದಿದ್ದರು. ಅದರಂತೆ ಈಗ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮದೇ ಸಿನಿಮಾ ಬಿಡುಗಡೆ ತಡೆಗೆ ನಿರ್ದೇಶಕರೊಬ್ಬರು ಕೋರ್ಟ್ ಮೆಟ್ಟಿಲೇರಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments