Webdunia - Bharat's app for daily news and videos

Install App

ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ ₹5ಕೋಟಿ ನೀಡಿ: ಸಲ್ಮಾನ್‌ ಖಾನ್‌ಗೆ ಮತ್ತೊಂದು ಬೆದರಿಕೆ ಸಂದೇಶ

Sampriya
ಮಂಗಳವಾರ, 5 ನವೆಂಬರ್ 2024 (14:25 IST)
Photo Courtesy X
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ ಬಂದಿದೆ. ಮುಂಬೈ ಪೊಲೀಸರಿಗೆ ಸೋಮವಾರ ರಾತ್ರಿ ವಾಟ್ಸಾಪ್ ಸಂದೇಶವೊಂದು ಬಂದಿದ್ದು, ನಟನಿಗೆ ಎರಡು ಆಯ್ಕೆಗಳಿವೆ - ಅವರು ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ ಎಂದು ಬೆದರಿಕೆಯೊಡ್ಡಲಾಗಿದೆ.

ಇದು ಒಂದು ವಾರದಲ್ಲಿ ಸಲ್ಮಾನ್ ಖಾನ್ ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ.

ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಕಳುಹಿಸಲಾದ ಸಂದೇಶದಲ್ಲಿ "ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮಾತನಾಡುತ್ತಿದ್ದಾರೆ ಮತ್ತು ಸಲ್ಮಾನ್ ಖಾನ್ ಬದುಕಬೇಕಾದರೆ,
ಅವರು ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆಯಾಚಿಸಬೇಕು ಅಥವಾ ₹ 5 ಕೋಟಿ ನೀಡಬೇಕು, ಹಾಗೆ ಮಾಡದಿದ್ದರೆ ನಾವು ಅವನನ್ನು ಕೊಲ್ಲುತ್ತೇವೆ ಎಂದು ಬರೆಯಲಾಗಿದೆ.

ಸಂದೇಶದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಳೆದ ವಾರ, ಅಕ್ಟೋಬರ್ 30 ರಂದು ಮುಂಬೈ ಸಂಚಾರ ನಿಯಂತ್ರಣವು  ಖಾನ್ ವಿರುದ್ಧ ಇದೇ ರೀತಿಯ ಬೆದರಿಕೆಯನ್ನು ಹಾಕಿ ₹ 2 ಕೋಟಿಗೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಬಾಂದ್ರಾ ಪೂರ್ವದ ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಅವರನ್ನು ಶೀಘ್ರದಲ್ಲೇ ಬಂಧಿಸಿದರು.

ಇದಕ್ಕೂ ಮುನ್ನ ನೋಯ್ಡಾದ 20 ವರ್ಷದ ಟ್ಯಾಟೂ ಕಲಾವಿದ ಗುಫ್ರಾನ್ ಖಾನ್ ಅವರನ್ನು ಸಲ್ಮಾನ್ ಖಾನ್ ಮತ್ತು ಬಾಂದ್ರಾ ಪೂರ್ವ ಶಾಸಕ ಜೀಶನ್ ಸಿದ್ದಿಕ್ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಬಂಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments