Webdunia - Bharat's app for daily news and videos

Install App

ಸುಳ್ಳು ಸುದ್ದಿಗಳ ವಿರುದ್ಧ ಸಿಡಿದೆದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ

Webdunia
ಭಾನುವಾರ, 18 ಏಪ್ರಿಲ್ 2021 (09:26 IST)
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ತಮ್ಮ ವಿರುದ್ಧ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.


ಇತ್ತೀಚೆಗೆ ಕೊರೋನಾ ಸೋಂಕಿತರಾಗಿ ಆಸ್ಪತ್ರೆ ಸೇರಿದ್ದ ಅರ್ಜುನ್ ಜನ್ಯಾ ಈಗ ಚೇತರಿಸಿಕೊಳ‍್ಳುತ್ತಿದ್ದಾರೆ. ಆದರೆ ಅವರ ಆರೋಗ್ಯ ಗಂಭೀರವಾಗಿದೆ. ಅವರ ಪತ್ನಿ ಕಣ್ಣೀರಿಡುತ್ತಿದ್ದಾರೆ ಎಂದು ಕೆಲವು ಯೂ ಟ್ಯೂಬ್ ಚಾನೆಲ್ ಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ.

ಇದು ಜನ್ಯಾ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಹಾಕಿರುವ ಜನ್ಯಾ ನಾನು ಚೇತರಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ನನ್ನ ಕೆಲಸಕ್ಕೆ ಮರಳಲಿದ್ದೇನೆ. ಆದರೆ ನನ್ನ ಬಗ್ಗೆ ಕೆಲವು ಯೂ ಟ್ಯೂಬ್ ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸುತ್ತವೆ. ಈ ಬಗ್ಗೆ ಸೈಬರ್ ಕ್ರೈಂ ಗಮನಕ್ಕೆ ತಂದಿರುವೆ. ಇಂತಹ ಸುಳ್ಳು ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳು ಕೂಡಲೇ ಈ ಸುದ್ದಿಗಳನ್ನು ತೆಗೆದು ಹಾಕಬೇಕು. ಇಲ್ಲದೇ ಹೋದರೆ ಕಾನೂನು ಕ್ರಮ ಕೈಗೊ‍ಳ್ಳುವುದಾಗಿ ಅರ್ಜುನ್ ಜನ್ಯಾ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments