Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಗೆ ಇನ್ನಾದ್ರೂ ಒಳ್ಳೆದಾಗಲಿ ಎಂದು ಪೂಜೆ ಮಾಡಿದ ದೊಡ್ಡಣ್ಣ ದಂಪತಿ

Krishnaveni K
ಬುಧವಾರ, 14 ಆಗಸ್ಟ್ 2024 (11:02 IST)
ಬೆಂಗಳೂರು: ಸತತ ಸೋಲುಗಳಿಂದ ಕಂಗೆಟ್ಟಿದ್ದ ಸ್ಯಾಂಡಲ್ ವುಡ್ ಗೆ ಮತ್ತೆ ಗೆಲುವು ಸಿಗಲಿ ಎಂದು ಕಲಾವಿದರ ಸಂಘದಲ್ಲಿ ಇಂದು ನಟ ದೊಡ್ಡಣ್ಣ ನೇತೃತ್ವದಲ್ಲಿ ಪೂಜೆ ನೆರವೇರಿದೆ.
 

ಚಿತ್ರರಂಗದ ಹಿರಿಯನಾಗಿ ದೊಡ್ಡಣ್ಣ ದಂಪತಿ ಕಲಾವಿದರ ಸಂಘದಲ್ಲಿ ನಡೆದ ಪೂಜೆ ನೆರವೇರಿಸಿದ್ದಾರೆ. ಉಡುಪಿ ಪ್ರಕಾಶ್ ಅಮ್ಮಣ್ಣಾಯ ಪೂಜಾ ಕಂಕರ್ಯಗಳ ನೇತೃತ್ವ ವಹಿಸಿದ್ದರು. ದೊಡ್ಡಣ್ಣ ದಂಪತಿ ಜೊತೆಗೆ ಕೆಲವು ಪದ್ಮಜಾ ರಾವ್ ಸೇರಿದಂತೆ ಕಲಾವಿದರೂ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಮೊನ್ನೆಯಷ್ಟೇ ರಾಕ್ ಲೈನ್ ವೆಂಕಟೇಶ್ ಮತ್ತು ದೊಡ್ಡಣ್ಣ ಪತ್ರಿಕಾಗೋಷ್ಠಿ ನಡೆಸಿ ಪೂಜೆ ನಡೆಸುತ್ತಿರುವ ವಿಚಾರದ ಬಗ್ಗೆ ಮಾತನಾಡಿದ್ದರು. ಆದರೆ ಇದರ ಬೆನ್ನಲ್ಲೇ ಅಪಸ್ವರ ಕೇಳಿಬಂದಿತ್ತು. ಈ ಪೂಜೆ ದರ್ಶನ್ ಗಾಗಿಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಮತ್ತೆ ಕೆಲವರು ಚಿತ್ರರಂಗಕ್ಕೆ ಒಳಿತಾಗಬೇಕಾದರೆ ಪೂಜೆ ಮಾಡಿದರೆ ಏನು ಪ್ರಯೋಜನ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದೆಲ್ಲದರ ನಡುವೆ ಇಂದು ಪೂಜೆ, ಹವನ ನಡೆಸಲಾಗಿದೆ. ಗಣಪತಿ ಹೋಮ, ನವಗ್ರಹ ಪೂಜೆ ಸೇರಿದಂತೆ ಸಿನಿಮಾ ರಂಗದ ಒಳಿತಿಗಾಗಿ ಯಜಮಾನನ ಸ್ಥಾನದಲ್ಲಿ ದೊಡ್ಡಣ್ಣ ದಂಪತಿ ಕುಳಿತು ಪೂಜೆ ನೆರವೇರಿಸಿದ್ದಾರೆ. ಈ ಪೂಜೆಯ ಬಳಿಕವಾದರೂ ಚಿತ್ರರಂಗದಲ್ಲಿ ಒಳ್ಳೆಯ ಬೆಳವಣಿಗೆಗಳಾಗಲಿ ಎಂದು ಎಲ್ಲರ ಹಾರೈಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments