Select Your Language

Notifications

webdunia
webdunia
webdunia
webdunia

ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ಕಾರಣ ಎಂದು ಕೆಟ್ಟ ಪೋಸ್ಟ್

Ashwini Puneeth

Sampriya

ಬೆಂಗಳೂರು , ಶುಕ್ರವಾರ, 5 ಏಪ್ರಿಲ್ 2024 (16:32 IST)
Photo Courtesy X
ಬೆಂಗಳೂರು: ಸತತ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜಕುಮಾರ್‌ ಅವರೇ ಕಾರಣ ಎಂದು ದೋಷಿಸಿ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಲಾಗಿದೆ.

ಇದೀಗ ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್  ಮಾಡಿದ ಕಿಡಿಗೇಡಿಗಳ ವಿರುದ್ಧ ದೂರನ್ನು ನೀಡಲು ನಿರ್ಧರಿಸಲಾಗಿದೆ.

ಐಪಿಎಲ್‌ ಈ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರುವುದಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಕಾಲ್ಗುಣ ಕಾರಣ ಎಂದು ದೋಷಿಸಿ ಅವರ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಹೌದು, ಇತ್ತೀಚೆಗಷ್ಟೇ ಐಪಿಎಲ್‌ ಶುರುವಾಗಿದೆ. ಅದಕ್ಕೂ ಮುನ್ನ ರಾಯಲ್‌ ಚಾಲೆಂಜರ್ಸ್‌ ಬ್ಯಾಂಗಲೋರ್‌ ಇದ್ದ ಹೆಸರನ್ನು ಬದಲಾವಣೆ ಮಾಡಲು, ಆರ್‌ಸಿಬಿ ಅನ್‌ಬಾಕ್ಸ್‌ ಇವೆಂಟ್‌ ಆಯೋಜನೆ ಮಾಡಿತ್ತು. ಆ ಕಾರ್ಯಕ್ರಮದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಂದು ಹೆಸರನ್ನು ಬದಲಿಸಲಾಗಿತ್ತು.

ಇನ್ನೂ ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು.  ಅಶ್ವಿನಿ ಅವರು ಬಂದಿದ್ದಕ್ಕೇ ಆರ್‌ಸಿಬಿ ಮ್ಯಾಚ್‌ ಸೋಲುತ್ತಿದೆ ಎಂಬ ಪೋಸ್ಟ್‌ ಇದೀಗ ವೈರಲ್‌ ಆಗಿದೆ.

ಅಷ್ಟಕ್ಕೂ ಆ ಪೋಸ್ಟ್‌ನಲ್ಲೇನಿದೆ?

@GAJAPADE6 ಹೆಸರಿನ ಟ್ವಿಟರ್‌ ಖಾತೆಯಿಂದ, "ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ ಮುಂ.. ಯರನ್ನು ಕರೀಬಾರದು. ಆರ್‌ಸಿಬಿ ಅನ್‌ಬಾಕ್ಸ್‌ ಇವೆಂಟ್‌ಗೆ ಈ ಮುಂ...ಯನ್ನು ಕರೆದಿದ್ದಕ್ಕೆ ಎಲ್ಲ ಮ್ಯಾಚ್‌ ಸೋಲ್ತಾ ಇದ್ದಾರೆ" ಎಂದು #Yuvarajkumar #PuneethRajkumar #Yuva #Dboss #DevilTheHero ಎಂಬ ಹ್ಯಾಷ್‌ಟ್ಯಾಗ್‌ ಹಾಕಿ ಪೋಸ್ಟ್‌ ಮಾಡಿದ್ದಾರೆ.
X ಖಾತೆಯೇ ಮಾಯ!

ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರೇ ಹೊಣೆ ಎಂದು ಟ್ವಿಟರ್‌ನಲ್ಲಿ ಈ ರೀತಿಯ ಪೋಸ್ಟ್‌ ಶೇರ್‌ ಮಾಡುತ್ತಿದ್ದಂತೆ, ಟೀಕೆಗೆ ಗುರಿಯಾಗಿದೆ.

ಪೋಸ್ಟ್ ವೈರಲ್ ಬೆನ್ನಲ್ಲೇ  ವ್ಯಾಪಕ ಟೀಕೆ ಬಂದಿದ್ದು, ಕೂಡಲಢ ಕೃತ್ಯ ಎಸಗಿದವರು ಕ್ಷಮೆ ಕೋರಬೇಕು. ಇನ್ನು ನಟ ದರ್ಶನ್ ಕೂಡಾ ತನ್ನ ಅಭಿಮಾನಿಗಳಿಗೆ ಬುದ್ಧಿ ಹೇಳಬೇಕೆಂದು ಕೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಶ್ಮಿಕಾ ಮಂದಣ್ಣಗೆ ಬರ್ತ್‌ಡೇ ಗಿಫ್ಟ್‌: ಪುಷ್ಪ 2, ದಿ ಗರ್ಲ್​​ಫ್ರೆಂಡ್ ಪೋಸ್ಟರ್‌ ಬಿಡುಗಡೆ