Webdunia - Bharat's app for daily news and videos

Install App

ಜಾಮೀನು ಅರ್ಜಿ ವಿಚಾರಣೆ ಅಂತ್ಯ: ಪವಿತ್ರ ಗೌಡ ಭವಿಷ್ಯ ಆ.31ಕ್ಕೆ ನಿರ್ಧಾರ

Sampriya
ಬುಧವಾರ, 28 ಆಗಸ್ಟ್ 2024 (16:39 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆದಿದ್ದು ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಇದೇ 31ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಕೇಸ್​​ನಲ್ಲಿ ನಟಿ ಪವಿತ್ರ ಗೌಡ ಜಾಮೀನು‌ ಕೋರಿ ಅರ್ಜಿ‌ ಸಲ್ಲಿಸಿದ್ದು ಅವರ ಪರ ವಕೀಲ ಟಾಮಿ ಸೆಬಾಸ್ಟಿಯನ್ ಅವರು ವಾದ ಮಂಡಿಸಿ, ಈ ಪ್ರಕರಣದಲ್ಲಿ ಪವಿತ್ರಾ ಗೌಡ ಯಾವುದೇ ಪಾತ್ರವಿಲ್ಲ. ದರ್ಶನ್ ಅವರೇ ಪವಿತ್ರಾ ಗೌಡ ಅವರನ್ನು ಕರೆದುಕೊಂಡು ಹೋಗಿದ್ದು. ಈ ಹಿನ್ನೆಲೆ ಅವರಿಗೆ ಜಾಮೀನು ನೀಡಬೇಕೆಂದು ಕೋರಿದರು.

ವಕೀಲ ಎಸ್ ಪಿ ಪಿ ಪ್ರಸನ್ನ ಕುಮಾರ್ ಅವರು ಪವಿತ್ರಾ ಗೌಡಗೆ ಯಾಕೆ ಜಾಮೀನು ಕೊಡಬಾರದು ಎಂಬುದಕ್ಕೆ ಹಲವು ಕಾರಣಗಳನ್ನು ನೀಡಿದ್ದಾರೆ.

ಪ್ರಕರಣ ಇನ್ನೂ ತನಿಖೆಯಲ್ಲಿದೆ. ಈಗಾಗಲೇ ಸಿಕ್ಕಿರುವ ಸಾಕ್ಷ್ಯಗಳಲ್ಲಿ ಕಪ್ಪು ಬಣ್ಣದ ಸ್ಕಾರ್ಫಿಯೋ ಕಾರಿನಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಶೆಡ್‌ನೊಳಗೆ ಹೋಗುತ್ತಿವುದು ರೆಕಾರ್ಡ್ ಆಗಿದೆ.  ಆರೋಪಿಗಳು ಕೃತ್ಯ ನಡೆಸಿರೋದು ಬಯಲಾಗಿದೆ. ಸಿಕ್ಕಿರುವ ಸಾಕ್ಷ್ಯಗಳು ತುಂಬಾ ಪ್ರಮುಖವಾಗಿದೆ.

ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿಯ ಆದೇಶವನ್ನು ಇದೇ 31ಕ್ಕೆ ಮುಂದೂಡಿದೆ. ಆದ್ದರಿಂದ ಸದ್ಯ ಪವಿತ್ರ ಗೌಡಗೇ ಜೈಲೇ ಗತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments