Webdunia - Bharat's app for daily news and videos

Install App

ದರ್ಶನ್‌ಗೆ ಜಾಮೀನು ಸಿಗುತ್ತಿದ್ದ ಹಾಗೇ ಬಳ್ಳಾರಿಯ ಪವರ್‌ ಫುಲ್‌ ದೇವಿಯ ಆಶೀರ್ವಾದ ಪಡೆದ ವಿಜಯಲಕ್ಷ್ಮಿ

sampriya
ಬುಧವಾರ, 30 ಅಕ್ಟೋಬರ್ 2024 (16:12 IST)
photo credit X
ಬಳ್ಳಾರಿ: ಹತ್ಯೆ ಪ್ರಕರಣದಲಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರವಾಗುತ್ತಿದ್ದ ಹಾಗೇ  ಅವರ ಅಭಿಮಾನಿಗಳಲ್ಲಿ, ಆಪ್ತ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಮತ್ತೊಂದೆಡೆ ದರ್ಶನ್‌ಗೆ ಬೇಲ್‌ ಸಿಗುತ್ತಿದ್ದ ಹಾಗೇ ದರ್ಶನ್‌ರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.

ಆದರ ಬೆನ್ನಲ್ಲೇ ವಿಜಯಲಕ್ಷ್ಮಿ ಬಳ್ಳಾರಿಯ ದುರ್ಗಮ್ಮ ದೇವಾಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಅವರು ಜೈಲು ಸೇರುತ್ತಿದ್ದ ಹಾಗೇ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗುತ್ತಿದ್ದರು. ಕಾನೂನು ಪ್ರಕ್ರಿಯೆ ಜತೆಗೆ ದೇವರ ದರ್ಶನ ಮಾಡಿ ಆದಷ್ಟು ಬೇಗ ಈ ಪ್ರಕರಣದಿಂದ ದರ್ಶನ್‌ ಹೊರಬರಲಿ ಎಂದು ಪ್ರಾರ್ಥಿಸುತ್ತಿದ್ದರು.

ಈ ಹಿಂದೆ ಕೂಡಾ ಕೊಲ್ಲೂರು ಮೂಕಾಂಬಿಕೆ, ಮೈಸೂರು ಚಾಮುಂಡೇಶ್ವರಿ ದೇವಿ, ಕಾಮಾಕ್ಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಮಾಡಿ, ಹರಕೆ ಕಟ್ಟಿಕೊಂಡಿದ್ದರು.

ಇದೀಗ ದರ್ಶನ್‌ಗೆ ಜಾಮೀನು ಸಿಕ್ಕ ಖುಷಿಯಲ್ಲಿ ವಿಜಯಲಕ್ಷ್ಮಿ ದೇವಿಯ ದರ್ಶನ ಪಡೆದರು. ಜಾಮೀನು ಪ್ರಕ್ರಿಯೆಗಳು ೫ ಗಂಟೆಯೊಳಗೆ ಮುಗಿದರೆ, ಎಲ್ಲರೂ ಅಂದುಕೊಂಡ ಹಾಗೇ ಇಂದು ಸಂಜೆ ದರ್ಶನ್‌ ಜೈಲಿನಿಂದ ಬಿಡುಗಡೆಯಾಗವ ಸಾಧ್ಯತೆಯಿದೆ. ಇದೀಗ ಜೈಲಿನಿಂದ ಅಂತಿಮ ಹಂತದ ಪ್ರಕ್ರಿಯೆಗಳು ನಡೆಯುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments